‘ಚುನಾವಣೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಮತದಾರರು ತೀರ್ಮಾನ ನೀಡುತ್ತಾರೆ. ದೇವೇಗೌಡರು ತಮ್ಮದೆ ಪಕ್ಷದಿಂದ ಅಳಿಯನನ್ನು ಸ್ಪರ್ಧೆಗಿಳಿಸದೆ ಬಿಜೆಪಿಯಿಂದ ಕಣಕ್ಕಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಬೆಂಗಳೂರು ಗ್ರಾಮಾಂತರ, ಮಂಡ್ಯ, ಹಾಸನ ಮತ್ತು ಕೋಲಾರ ಕ್ಷೇತ್ರಗಳನ್ನು ಗೆಲ್ಲಲು ಸಾಧ್ಯವಿಲ್ಲ. ಈ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವು ಖಚಿತ ಎಂದರು.