<p><strong>ತುಮಕೂರು</strong>: ಸೈಬರ್ ಆರೋಪಿಗಳು ‘ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ ಗಳಿಸಬಹುದು’ ಎಂಬ ಆಸೆ ತೋರಿಸಿ ವೈದ್ಯ ದಂಪತಿಗೆ ₹12.46 ಲಕ್ಷ ವಂಚಿಸಿದ್ದಾರೆ.</p>.<p>ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಡಾ.ಎಸ್.ಕುಲಕರ್ಣಿ, ಡಾ.ಪ್ರಿಯಾಂಕಾ ಕುಲಕುರ್ಣಿ ಅವರು ಲಾಭದ ಆಮಿಷಕ್ಕೆ ಒಳಗಾಗಿ ಹಣ ಕಳೆದುಕೊಂಡಿದ್ದಾರೆ.</p>.<p>ವಾಟ್ಸ್ ಆ್ಯಪ್ ಮುಖಾಂತರ ಪರಿಚಯಿಸಿಕೊಂಡ ವಂಚಕರು ಈ ಇಬ್ಬರನ್ನು ಒಂದು ಗ್ರೂಪ್ಗೆ ಸೇರಿಸಿದ್ದಾರೆ. ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸ್ವಲ್ಪ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂದು ತಿಳಿಸಿದ್ದಾರೆ. ನಂತರ ‘ಜಿಯೋಪ್ಟೊ ಕ್ರಪ್ಟೊ ಟ್ರೇಡಿಂಗ್’ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದಾರೆ.</p>.<p>ಎಸ್.ಕುಲಕರ್ಣಿ ದಂಪತಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಲು ಆರಂಭಿಸಿದ್ದಾರೆ. ಪ್ರಾರಂಭದಲ್ಲಿ ಅವರಿಗೆ ₹826 ಲಾಭಾಂಶ ಎಂದು ವಾಪಸ್ ಹಾಕಿದ್ದಾರೆ. ಇದನ್ನು ನಂಬಿದ ಇಬ್ಬರು ತಮ್ಮ ಖಾತೆಗಳಿಂದ ಸೈಬರ್ ಕಳ್ಳರು ತಿಳಿಸಿದ ವಿವಿಧ ಖಾತೆಗಳಿಗೆ ಏ. 10ರಿಂದ ಜೂನ್ 13ರ ವರೆಗೆ ಹಂತ ಹಂತವಾಗಿ ₹12.46 ಲಕ್ಷ ವರ್ಗಾವಣೆ ಮಾಡಿದ್ದಾರೆ.</p>.<p>ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹಣದ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಸೈಬರ್ ಆರೋಪಿಗಳು ‘ಷೇರು ಮಾರುಕಟ್ಟೆಯಲ್ಲಿ ಉತ್ತಮ ಲಾಭ ಗಳಿಸಬಹುದು’ ಎಂಬ ಆಸೆ ತೋರಿಸಿ ವೈದ್ಯ ದಂಪತಿಗೆ ₹12.46 ಲಕ್ಷ ವಂಚಿಸಿದ್ದಾರೆ.</p>.<p>ಶಿರಾ ತಾಲ್ಲೂಕಿನ ಪಟ್ಟನಾಯಕನಹಳ್ಳಿಯ ಡಾ.ಎಸ್.ಕುಲಕರ್ಣಿ, ಡಾ.ಪ್ರಿಯಾಂಕಾ ಕುಲಕುರ್ಣಿ ಅವರು ಲಾಭದ ಆಮಿಷಕ್ಕೆ ಒಳಗಾಗಿ ಹಣ ಕಳೆದುಕೊಂಡಿದ್ದಾರೆ.</p>.<p>ವಾಟ್ಸ್ ಆ್ಯಪ್ ಮುಖಾಂತರ ಪರಿಚಯಿಸಿಕೊಂಡ ವಂಚಕರು ಈ ಇಬ್ಬರನ್ನು ಒಂದು ಗ್ರೂಪ್ಗೆ ಸೇರಿಸಿದ್ದಾರೆ. ಷೇರು ಮಾರುಕಟ್ಟೆಯ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಸ್ವಲ್ಪ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸಬಹುದು ಎಂದು ತಿಳಿಸಿದ್ದಾರೆ. ನಂತರ ‘ಜಿಯೋಪ್ಟೊ ಕ್ರಪ್ಟೊ ಟ್ರೇಡಿಂಗ್’ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳುವಂತೆ ಹೇಳಿದ್ದಾರೆ.</p>.<p>ಎಸ್.ಕುಲಕರ್ಣಿ ದಂಪತಿ ಆ್ಯಪ್ ಡೌನ್ಲೋಡ್ ಮಾಡಿಕೊಂಡು ಹಣ ಹೂಡಿಕೆ ಮಾಡಲು ಆರಂಭಿಸಿದ್ದಾರೆ. ಪ್ರಾರಂಭದಲ್ಲಿ ಅವರಿಗೆ ₹826 ಲಾಭಾಂಶ ಎಂದು ವಾಪಸ್ ಹಾಕಿದ್ದಾರೆ. ಇದನ್ನು ನಂಬಿದ ಇಬ್ಬರು ತಮ್ಮ ಖಾತೆಗಳಿಂದ ಸೈಬರ್ ಕಳ್ಳರು ತಿಳಿಸಿದ ವಿವಿಧ ಖಾತೆಗಳಿಗೆ ಏ. 10ರಿಂದ ಜೂನ್ 13ರ ವರೆಗೆ ಹಂತ ಹಂತವಾಗಿ ₹12.46 ಲಕ್ಷ ವರ್ಗಾವಣೆ ಮಾಡಿದ್ದಾರೆ.</p>.<p>ವಾಟ್ಸ್ ಆ್ಯಪ್ ಗ್ರೂಪ್ನಲ್ಲಿ ಹಣದ ಬಗ್ಗೆ ಮಾಹಿತಿ ಕೇಳಿದಾಗ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>