ವೈದ್ಯಕೀಯೇತರರಿಗೆ ಸಮುದಾಯ ಆರೋಗ್ಯ ರಕ್ಷಕರ ಹೆಸರಿನಲ್ಲಿ ಸ್ವತಂತ್ರವಾಗಿ ಪ್ರಾಥಮಿಕ ಚಿಕಿತ್ಸೆ ನೀಡಲು ಅವಕಾಶ ಕಲ್ಪಿಸಿದರೆ ನಕಲಿ ವೈದ್ಯರ ಸೃಷ್ಟಿಗೆ ಕಾರಣವಾಗುತ್ತದೆ. ಆಯುರ್ವೇದ, ಯುನಾನಿ ಚಿಕಿತ್ಸೆಗಳು ತಮ್ಮದೇ ಆದ ಇತಿಹಾಸ, ಪರಂಪರೆ ಹೊಂದಿವೆ. ಪ್ರಾಚೀನ ವೈದ್ಯ ಪದ್ಧತಿಯ ಸಂರಕ್ಷಣೆ ಅಗತ್ಯವಿದೆ. ಅದೇ ಉದ್ದೇಶದಿಂದ ಆಯುಷ್ ಸಚಿವಾಲಯ ಸ್ಥಾಪಿಸಲಾಗಿದೆ. ಆದರೆ ಶಸ್ತ್ರ ಚಿಕಿತ್ಸೆಗೆ ಅವಕಾಶ ನೀಡಿದರೆ ಅಪಾಯ ಎದುರಾಗಲಿದೆ ಎಂದು ಎಚ್ಚರಿಸಿದರು.