ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಯಿದಾಳಿ; ಗಾಯಗೊಂಡ ವೃದ್ಧೆ

Last Updated 14 ಏಪ್ರಿಲ್ 2019, 12:04 IST
ಅಕ್ಷರ ಗಾತ್ರ

ಕುಣಿಗಲ್: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಆಶ್ರಯ ಪಡೆದಿದ್ದ ವೃದ್ಧೆಯ ಮೇಲೆ ಭಾನುವಾರ ಬೆಳಗಿನ ಜಾವ ನಾಯಿಗಳು ದಾಳಿಮಾಡಿ ಕಚ್ಚಿ ಗಾಯಗೊಳಿಸಿವೆ.

ತಾಲ್ಲೂಕಿನ ಸೊಬಾಗನಹಳ್ಳಿ ನಂಜಮ್ಮ ಕಾರಣಾಂತರಗಳಿಂದ ಮನೆ ತೊರೆದಿದ್ದು, ಹಲವಾರು ದಿನಗಳಿಂದ ಸಾರ್ವಜನಿಕ ಆಸ್ಪತ್ರೆಯ ವಾಹನಗಳ ತಂಗುದಾಣದಲ್ಲಿ ಆಶ್ರಯ ಪಡೆದಿದ್ದರು. ಭಾನುವಾರ ಬೆಳಗಿನ ಜಾವ ನಂಜಮ್ಮನ ಮೇಲೆ ನಾಯಿಗಳು ದಾಳಿ ಮಾಡಿ ಕಚ್ಚಿವೆ. ವೃದ್ಧೆ ಚೀರಾಡುತ್ತಿದ್ದುದನ್ನು ಕಂಡ ಸಮೀಪದ ಚಹ ಅಂಗಡಿ ಮಾಲೀಕ ವೃದ್ಧೆಯನ್ನು ರಕ್ಷಿಸಿದ್ದಾರೆ. ನಂತರ ದಲಿತ ಮುಖಂಡ ದಲಿತ್ ನಾರಾಯಣ್ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿ ಸಂಬಂಧಿಗಳಿಗೆ ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT