<p><strong>ತುಮಕೂರು</strong>: ನಗರದ ನಜರಾಬಾದ್ ಕಾಲೊನಿ ಹಾಗೂ ಸದಾಶಿವನಗರದಲ್ಲಿ ಗುರುವಾರ ನಾಯಿಗಳ ಗುಂಪು ದಾಳಿ ನಡೆಸಿದ್ದು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.</p>.<p>ಮಧ್ಯಾಹ್ನ ನಜರಾಬಾದ್ ಸ್ಮಶಾನದ ಹಿಂಭಾಗ ಮಸೀದಿ ರಸ್ತೆಯಲ್ಲಿ ಮಕ್ಕಳು ಆಟವಾಡುತ್ತಿದ್ದರು. ಆಗ ನಾಯಿಗಳ ಹಿಂಡು ದಾಳಿ ನಡೆಸಿವೆ. ಸದಾಶಿವನಗರದಲ್ಲಿಯೂ ಆಟವಾಡುತ್ತಿದ್ದ ಮಕ್ಕಳಿಗೆ ನಾಯಿಗಳು ಕಚ್ಚಿವೆ.</p>.<p>ಹೀಗೆ ದಿಢೀರ್ ನಡೆದ ದಾಳಿಯಿಂದ ನಾಗರಿಕರು ಮತ್ತು ಪೋಷಕರು ಬೆಚ್ಚಿಬಿದ್ದಿದ್ದಾರೆ. ಮಕ್ಕಳನ್ನು ತಕ್ಷಣವೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಈ ಭಾಗದಲ್ಲಿ ಹಂದಿಗಳ ಓಡಾಟ ಹೆಚ್ಚಿದೆ. ಹಂದಿಗಳ ಮೇಲೆ ದಾಳಿ ನಡೆಸುತ್ತಿದ್ದ ನಾಯಿಗಳು ಈಗ ಮಕ್ಕಳ ಮೇಲೆ ದಾಳಿ ನಡೆಸಿವೆ.</p>.<p>‘ಚಿಕ್ಕ ಮಕ್ಕಳು, ವಯಸ್ಸಾದವರು ಒಬ್ಬರೇ ಓಡಾಡಲು ಆಗದಂತಹ ಸ್ಥಿತಿ ಇದೆ. ಗುಂಪು ಗುಂಪಾಗಿ ಬರುವ ನಾಯಿಗಳು ಏಕಾ ಏಕಿ ದಾಳಿ ಮಾಡುತ್ತಿವೆ. ಪಾಲಿಕೆ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳದೆ ಇದ್ದರೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ ಎಚ್ಚರಿಸಿದ್ದಾರೆ.</p>.<p>‘ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಬೇಕು. ಗಾಯಗೊಂಡ ಮಕ್ಕಳ ಚಿಕಿತ್ಸೆ ವೆಚ್ಚವನ್ನು ಪಾಲಿಕೆಯೇ ಭರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ನಗರದ ನಜರಾಬಾದ್ ಕಾಲೊನಿ ಹಾಗೂ ಸದಾಶಿವನಗರದಲ್ಲಿ ಗುರುವಾರ ನಾಯಿಗಳ ಗುಂಪು ದಾಳಿ ನಡೆಸಿದ್ದು 10ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿದ್ದಾರೆ.</p>.<p>ಮಧ್ಯಾಹ್ನ ನಜರಾಬಾದ್ ಸ್ಮಶಾನದ ಹಿಂಭಾಗ ಮಸೀದಿ ರಸ್ತೆಯಲ್ಲಿ ಮಕ್ಕಳು ಆಟವಾಡುತ್ತಿದ್ದರು. ಆಗ ನಾಯಿಗಳ ಹಿಂಡು ದಾಳಿ ನಡೆಸಿವೆ. ಸದಾಶಿವನಗರದಲ್ಲಿಯೂ ಆಟವಾಡುತ್ತಿದ್ದ ಮಕ್ಕಳಿಗೆ ನಾಯಿಗಳು ಕಚ್ಚಿವೆ.</p>.<p>ಹೀಗೆ ದಿಢೀರ್ ನಡೆದ ದಾಳಿಯಿಂದ ನಾಗರಿಕರು ಮತ್ತು ಪೋಷಕರು ಬೆಚ್ಚಿಬಿದ್ದಿದ್ದಾರೆ. ಮಕ್ಕಳನ್ನು ತಕ್ಷಣವೆ ಜಿಲ್ಲಾ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಿದರು. ಈ ಭಾಗದಲ್ಲಿ ಹಂದಿಗಳ ಓಡಾಟ ಹೆಚ್ಚಿದೆ. ಹಂದಿಗಳ ಮೇಲೆ ದಾಳಿ ನಡೆಸುತ್ತಿದ್ದ ನಾಯಿಗಳು ಈಗ ಮಕ್ಕಳ ಮೇಲೆ ದಾಳಿ ನಡೆಸಿವೆ.</p>.<p>‘ಚಿಕ್ಕ ಮಕ್ಕಳು, ವಯಸ್ಸಾದವರು ಒಬ್ಬರೇ ಓಡಾಡಲು ಆಗದಂತಹ ಸ್ಥಿತಿ ಇದೆ. ಗುಂಪು ಗುಂಪಾಗಿ ಬರುವ ನಾಯಿಗಳು ಏಕಾ ಏಕಿ ದಾಳಿ ಮಾಡುತ್ತಿವೆ. ಪಾಲಿಕೆ ಅಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳದೆ ಇದ್ದರೆ ಪ್ರತಿಭಟನೆ ನಡೆಸುತ್ತೇವೆ’ ಎಂದು ಸಿಪಿಎಂ ನಗರ ಕಾರ್ಯದರ್ಶಿ ಎಸ್.ರಾಘವೇಂದ್ರ ಎಚ್ಚರಿಸಿದ್ದಾರೆ.</p>.<p>‘ನಗರದಲ್ಲಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಅವುಗಳಿಗೆ ಸಂತಾನಹರಣ ಚಿಕಿತ್ಸೆ ಮಾಡಬೇಕು. ಗಾಯಗೊಂಡ ಮಕ್ಕಳ ಚಿಕಿತ್ಸೆ ವೆಚ್ಚವನ್ನು ಪಾಲಿಕೆಯೇ ಭರಿಸಬೇಕು’ ಎಂದು ಒತ್ತಾಯಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>