<p>ತುಮಕೂರು: ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಿಂಜರಿಕೆ ಅನಗತ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿ.ವಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿದ ತಂತ್ರಾಂಶದ ಕುರಿತು ಆನ್ಲೈನ್ ಮೂಲಕ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವದ ಆದರ್ಶ ಕಾಪಾಡಿ<br />ಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಮಾಡಿದ್ದು, ಮಾಹಿತಿ ಹಕ್ಕಿನಡಿ ಕೇಳಿದ ಮಾಹಿತಿಗೆ ಸಕಾಲದಲ್ಲಿ ಉತ್ತರ ನೀಡುವುದು ಸಾರ್ವಜನಿಕ ಪ್ರಾಧಿಕಾರದ ಧರ್ಮವಾಗಿದೆ. ಆಡಳಿತ<br />ದಲ್ಲಿ ಪಾರದರ್ಶಕತೆ ಇದ್ದರೆ ಯಾವುದೇ ರೀತಿಯ ಮಾಹಿತಿಯನ್ನು ಸಕಾಲದಲ್ಲಿ ನೀಡಬಹುದಾಗಿದೆ ಎಂದರು.</p>.<p>ವಿ.ವಿ ಕುಲಸಚಿವ ಪ್ರೊ.ಕೆ.ಶಿವಚಿತ್ತಪ್ಪ, ‘ಸಾರ್ವಜನಿಕವಾಗಿ ಜವಾಬ್ದಾರಿ ಸ್ಥಾನದಲ್ಲಿ ಇರುವ ಪ್ರತಿಯೊಬ್ಬರೂ ಮಾಹಿತಿ ಹಕ್ಕಿನ ಬಗ್ಗೆ ಜ್ಞಾನ ಹೊಂದಿರಬೇಕು. ಮಾಹಿತಿ ಮತ್ತು ತಂತ್ರಜ್ಞಾನ ಬಳಕೆಯಲ್ಲಿ ವಿ.ವಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಆನ್ಲೈನ್ ಮಾಹಿತಿ ಹಕ್ಕಿನ ಕುರಿತು ಕಾರ್ಯಾಗಾರ ಏರ್ಪಡಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ಹೇಳಿದರು.</p>.<p>ವಿ.ವಿ ಮಾಹಿತಿ ಹಕ್ಕಿನ ನೋಡಲ್ ಅಧಿಕಾರಿ ಡಾ.ರಮೇಶ್ ಸಾಲಿಯಾನ್ ಕಾರ್ಯಾಗಾರ ನಡೆಸಿಕೊಟ್ಟರು. ವಿ.ವಿ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಮಾಹಿತಿ ಹಕ್ಕು ಕಾಯ್ದೆಯಡಿ ಸಾರ್ವಜನಿಕರಿಗೆ ಮಾಹಿತಿ ನೀಡಲು ಹಿಂಜರಿಕೆ ಅನಗತ್ಯ ಎಂದು ತುಮಕೂರು ವಿಶ್ವವಿದ್ಯಾನಿಲಯ ಕುಲಪತಿ ಪ್ರೊ.ವೈ.ಎಸ್.ಸಿದ್ದೇಗೌಡ ಅಭಿಪ್ರಾಯಪಟ್ಟರು.</p>.<p>ತುಮಕೂರು ವಿ.ವಿ ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸಿದ ತಂತ್ರಾಂಶದ ಕುರಿತು ಆನ್ಲೈನ್ ಮೂಲಕ ಗುರುವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.</p>.<p>ಪ್ರಜಾಪ್ರಭುತ್ವದ ಆದರ್ಶ ಕಾಪಾಡಿ<br />ಕೊಳ್ಳುವ ನಿಟ್ಟಿನಲ್ಲಿ ಮಾಹಿತಿ ಹಕ್ಕು ಕಾಯ್ದೆ ಜಾರಿಮಾಡಿದ್ದು, ಮಾಹಿತಿ ಹಕ್ಕಿನಡಿ ಕೇಳಿದ ಮಾಹಿತಿಗೆ ಸಕಾಲದಲ್ಲಿ ಉತ್ತರ ನೀಡುವುದು ಸಾರ್ವಜನಿಕ ಪ್ರಾಧಿಕಾರದ ಧರ್ಮವಾಗಿದೆ. ಆಡಳಿತ<br />ದಲ್ಲಿ ಪಾರದರ್ಶಕತೆ ಇದ್ದರೆ ಯಾವುದೇ ರೀತಿಯ ಮಾಹಿತಿಯನ್ನು ಸಕಾಲದಲ್ಲಿ ನೀಡಬಹುದಾಗಿದೆ ಎಂದರು.</p>.<p>ವಿ.ವಿ ಕುಲಸಚಿವ ಪ್ರೊ.ಕೆ.ಶಿವಚಿತ್ತಪ್ಪ, ‘ಸಾರ್ವಜನಿಕವಾಗಿ ಜವಾಬ್ದಾರಿ ಸ್ಥಾನದಲ್ಲಿ ಇರುವ ಪ್ರತಿಯೊಬ್ಬರೂ ಮಾಹಿತಿ ಹಕ್ಕಿನ ಬಗ್ಗೆ ಜ್ಞಾನ ಹೊಂದಿರಬೇಕು. ಮಾಹಿತಿ ಮತ್ತು ತಂತ್ರಜ್ಞಾನ ಬಳಕೆಯಲ್ಲಿ ವಿ.ವಿ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ. ಆನ್ಲೈನ್ ಮಾಹಿತಿ ಹಕ್ಕಿನ ಕುರಿತು ಕಾರ್ಯಾಗಾರ ಏರ್ಪಡಿಸಿದ ಹೆಗ್ಗಳಿಕೆಗೆ ಪಾತ್ರವಾಗಿದೆ’ ಎಂದು ಹೇಳಿದರು.</p>.<p>ವಿ.ವಿ ಮಾಹಿತಿ ಹಕ್ಕಿನ ನೋಡಲ್ ಅಧಿಕಾರಿ ಡಾ.ರಮೇಶ್ ಸಾಲಿಯಾನ್ ಕಾರ್ಯಾಗಾರ ನಡೆಸಿಕೊಟ್ಟರು. ವಿ.ವಿ ಎಲ್ಲಾ ಸಾರ್ವಜನಿಕ ಮಾಹಿತಿ ಅಧಿಕಾರಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>