ಹೇಮಾವತಿ ನಾಲಾ ವಲಯದ ಕಾರ್ಯಪಾಲಕ ಎಂಜಿನಿಯರ್ ಮುರುಳಿ ಅವರನ್ನು ಈ ಬಗ್ಗೆ ವಿಚಾರಿಸಿದ್ದು, ‘ಕಟ್ಟಡ ನಿರ್ಮಿಸುವಂತೆ ತಿಳಿಸಲಾಗಿತ್ತು. ಈ ರೀತಿ ಮರಗಳನ್ನು ಕಡಿದಿರುವುದು ಗಮನಕ್ಕೆ ಬಂದಿಲ್ಲ’ ಎಂದು ಉತ್ತರಿಸುತ್ತಾರೆ. ಮರಗಳನ್ನು ಕಡಿಯುವ ಕುರಿತು ಅರಣ್ಯ ಇಲಾಖೆ ಮೂಲಕ ಟೆಂಡರ್ ಕರೆಯಬೇಕಿತ್ತು. ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡದೆ ಏಕಾಏಕಿ ಕಡಿಯಲಾಗಿದೆ ಎಂದು ಆರೋಪಿಸಿದ್ದಾರೆ.