ಅದ್ಧೂರಿ ಮದುವೆ: ಮದುವೆ ಸಂದರ್ಭದಲ್ಲಿ ಸಾಕಷ್ಟು ಒಡವೆ ನೀಡಿ ಅದ್ಧೂರಿಯಾಗಿ ಮದುವೆ ಮಾಡಿಕೊಡಲಾಗಿತ್ತು. ಇಷ್ಟಾದರೂ ಗಂಡನ ಮನೆಯವರು ಕಿರುಕುಳ ನೀಡುತ್ತಿದ್ದರು. ಸಂಬಂಧಿಕರ ಜತೆಯೂ ಮಾತನಾಡಲು ಬಿಡದೆ ಮಾನಸಿಕ ಹಿಂಸೆ ಕೊಡುತ್ತಿದ್ದರು. ಹಣ, ಒಡವೆ ತರುವಂತೆ ಒಡೆಯುತ್ತಿದ್ದರು. ಇದೀಗ ಆಕೆಯ ಸಾವಿಗೆ ಗಂಡನ ಮನೆಯವರ ಕಿರುಕುಳವೇ ಕಾರಣ ಎಂದು ಗೌರಮ್ಮ ಕುಟುಂಬಸ್ಥರು ತುಮಕೂರು ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.