ಸಂಸದ ಜಿ.ಎಸ್.ಬಸವರಾಜ್ ಮಾತನಾಡಿ, ‘ಡಾ.ಗಿರೀಶ್ ಕಾರ್ನಾಡ್ ಅವರು ದೇಶ ಕಂಡ ಶ್ರೇಷ್ಠ ಸಾಹಿತಿ, ನಾಟಕಕಾರರು, ಭಾಷಾ ಜ್ಞಾನಿಯಾಗಿದ್ದರು. ಜ್ಞಾನಪೀಠ ಪ್ರಶಸ್ತಿ ಪಡೆದಿದ್ದ ಅವರು ಕರ್ನಾಟಕಕ್ಕೆ ದೇಶ, ವಿದೇಶಗಳಲ್ಲಿ ಹೆಸರು ತಂದುಕೊಟ್ಟವರು. ಇಂಥವರು ನಮ್ಮ ನಾಡಿನವರು ಎಂದು ಹೇಳಿಕೊಳ್ಳಲು ಹೆಮ್ಮೆ’ ಎಂದು ನುಡಿದರು.