ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಾತೆ ಬದಲಾವಣೆಯಿಂದ ಮಾಧುಸ್ವಾಮಿ ಅಸಮಾಧಾನ; ಸಿಎಂ ಕಾರ್ಯಕ್ರಮಕ್ಕೆ ಗೈರು

Last Updated 21 ಜನವರಿ 2021, 7:24 IST
ಅಕ್ಷರ ಗಾತ್ರ

ತುಮಕೂರು: ಶಿವಕುಮಾರ ಸ್ವಾಮೀಜಿ ಅವರ ಎರಡನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭಾಗವಹಿಸಿದ್ದಾರೆ. ಆದರೆ ಖಾತೆ ಹಂಚಿಕೆಯಲ್ಲಿ ಅಸಮಾಧಾನಗೊಂಡಿರುವಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಮಠದ ಪರಮ ಭಕ್ತ ಜೆ.ಸಿ.ಮಾಧುಸ್ವಾಮಿ ಕಾರ್ಯಕ್ರಮಕ್ಕೆ ಗೈರಾಗಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಶಿವಕುಮಾರ ಸ್ವಾಮೀಜಿ ಅವರ ಗದ್ದುಗೆ ದರ್ಶನ ಪಡೆದು ನೇರವಾಗಿ ವೇದಿಕೆಗೆ ಬಂದರು.

ಆದರೆ ಕಾರ್ಯಕ್ರಮಕ್ಕೆ ಜೆ.ಸಿ. ಮಾಧುಸ್ವಾಮಿ ಗೈರಾಗಿದ್ದಾರೆ. ಸಚಿವರಿಗೆ ಅಧಿಕೃತ ಆಹ್ವಾನ ಇರಲಿಲ್ಲ. ಕಾರ್ಯಕ್ರಮದ ಆಹ್ವಾನ ಪತ್ರಿಕೆಗಳಲ್ಲಿ ಅವರ ಹೆಸರು ಇಲ್ಲ ಎಂಬುದು ತಿಳಿದು ಬಂದಿದೆ.

ಮಾಧುಸ್ವಾಮಿ ಮಠದ ಪರಮಭಕ್ತರಾಗಿದ್ದು, ಮಠದ ಪ್ರತಿ ಕಾರ್ಯಕ್ರಮಗಳಲ್ಲಿ ಮುಂಚೂಣಿಯಲ್ಲಿ ಇರುತ್ತಿದ್ದರು. ಶಿವಕುಮಾರ ಸ್ವಾಮೀಜಿ ಅವರ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದರು.

ಖಾತೆ ಬದಲಾವಣೆಯಿಂದ ಮಾಧುಸ್ವಾಮಿ ಅಸಮಾಧಾನಗೊಂಡಿದ್ದಾರೆ. ಈ ಕಾರಣದಿಂದ ಬಂದಿಲ್ಲ ಎನ್ನುವ ಸುದ್ದಿ ಹಬ್ಬಿದೆ. ಸಣ್ಣ ನೀರಾವರಿ ವಿಚಾರವಾಗಿ ಚಿಕ್ಕನಾಯಕನಹಳ್ಳಿ, ತಿಪಟೂರು ಸೇರಿದಂತೆ ಜಿಲ್ಲೆಯಲ್ಲಿ ಮಾಧುಸ್ವಾಮಿ ಹೆಚ್ಚಿನ ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ.

ವೇದಿಕೆಯಲ್ಲಿ ಸಿದ್ಧಲಿಂಗ ಸ್ವಾಮೀಜಿ, ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಸ್ವಾಮೀಜಿ, ಉಪಮುಖ್ಯಮಂತ್ರಿ ಸಿ.ಎನ್ ಅಶ್ವತ್ಥನಾರಾಯಣ , ಕೇಂದ್ರ ಸಚಿವ ಪ್ರತಾಪ ಚಂದ್ರ ಸಾರಂಗಿ, ಸಂಸದ ಜಿ.ಎಸ್.ಬಸವರಾಜು, ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಿ.ಎಸ್.ಪರಮಶಿವಯ್ಯ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT