<p><strong>ತುಮಕೂರು</strong>: ‘ಕುಡಿಯುವ ನೀರು ಕಲುಷಿತವಾಗದಂತೆ ಕ್ರಮ ವಹಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ 694 ಕೊಳವೆ ಬಾವಿಗಳ ನೀರಿನ ಗುಣಮಟ್ಟ ಪರೀಕ್ಷಿಸಬೇಕು’ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p><a href="https://www.prajavani.net/amp/story/district%2Ftumakuru%2Fcontaminated-drinking-water-tumakuru-municipal-report-3709777">‘ನಗರದಲ್ಲಿ 30 ಕಡೆ ನೀರು ಕಲುಷಿತ’ </a>ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಶನಿವಾರ ವರದಿ ಪ್ರಕಟವಾಗಿತ್ತು.</p>.<p>ನಗರದ ಪಾಲಿಕೆ ಕಚೇರಿಯಲ್ಲಿ ಶನಿವಾರ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜತೆ ಸಭೆ ನಡೆಸಿದ ಶಾಸಕರು ಅಗತ್ಯ ಮಾಹಿತಿ ಪಡೆದರು. ಸಕಾಲಕ್ಕೆ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ನಿರ್ದೇಶಿಸಿದರು.</p>.<p>ಪ್ರತಿ ಮನೆಗೆ ಶುದ್ಧ ನೀರು ಸರಬರಾಜು ಮಾಡಬೇಕು. ಪ್ರತಿ ದಿನ ಕಾಲೊನಿ, ಹಾಸ್ಟೆಲ್, ಶಾಲಾ-ಕಾಲೇಜು, ಆಸ್ಪತ್ರೆ, ಹೋಟೆಲ್, ಬಸ್ ನಿಲ್ದಾಣ ಹಾಗೂ ವಿವಿಧೆಡೆ ಇರುವ ಕೊಳವೆ ಬಾವಿ ನೀರು ಪರೀಕ್ಷಿಸಬೇಕು. ಇದಕ್ಕಾಗಿ ಪಿಎನ್ಆರ್ ಪಾಳ್ಯದಲ್ಲಿ ಪ್ರಯೋಗಾಲಯ ಆರಂಭಿಸಲಾಗಿದೆ. ಇಲ್ಲಿ ಪರೀಕ್ಷೆ ಮಾಡಿಸಬೇಕು ಎಂದರು.</p>.<p>ಕುಡಿಯುವ ನೀರು ಪೈಪ್ಲೈನ್ಗೆ ಯುಜಿಡಿ ನೀರು ಸೇರದಂತೆ ನೋಡಿಕೊಳ್ಳಬೇಕು. ನೀರು ಕುಡಿಯಲು ಯೋಗ್ಯವೇ ಎಂಬುವುದನ್ನು ಖಚಿತ ಪಡಿಸಿಕೊಂಡ ನಂತರವೇ ಪೂರೈಕೆ ಮಾಡಬೇಕು ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಸಿ.ಯೋಗಾನಂದ, ಉಪ ಆಯುಕ್ತ ಮನು, ಆರೋಗ್ಯಾಧಿಕಾರಿ ಡಾ.ಯೋಗೀಶ್, ಎಂಜಿನಿಯರ್ಗಳಾದ ಸಂದೀಪ್, ವಿನಯ್, ಅನಿಲ್, ಪ್ರವೀಣ್ ಇತರರು ಹಾಜರಿದ್ದರು.</p>.ತುಮಕೂರು: ನಗರದಲ್ಲಿ 30 ಕಡೆ ನೀರು ಕಲುಷಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ‘ಕುಡಿಯುವ ನೀರು ಕಲುಷಿತವಾಗದಂತೆ ಕ್ರಮ ವಹಿಸಬೇಕು. ಮಹಾನಗರ ಪಾಲಿಕೆ ವ್ಯಾಪ್ತಿಯ 694 ಕೊಳವೆ ಬಾವಿಗಳ ನೀರಿನ ಗುಣಮಟ್ಟ ಪರೀಕ್ಷಿಸಬೇಕು’ ಎಂದು ಶಾಸಕ ಜಿ.ಬಿ.ಜ್ಯೋತಿಗಣೇಶ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.</p>.<p><a href="https://www.prajavani.net/amp/story/district%2Ftumakuru%2Fcontaminated-drinking-water-tumakuru-municipal-report-3709777">‘ನಗರದಲ್ಲಿ 30 ಕಡೆ ನೀರು ಕಲುಷಿತ’ </a>ಶೀರ್ಷಿಕೆಯಡಿ ‘ಪ್ರಜಾವಾಣಿ’ಯಲ್ಲಿ ಶನಿವಾರ ವರದಿ ಪ್ರಕಟವಾಗಿತ್ತು.</p>.<p>ನಗರದ ಪಾಲಿಕೆ ಕಚೇರಿಯಲ್ಲಿ ಶನಿವಾರ ಕುಡಿಯುವ ನೀರಿಗೆ ಸಂಬಂಧಿಸಿದಂತೆ ಅಧಿಕಾರಿಗಳ ಜತೆ ಸಭೆ ನಡೆಸಿದ ಶಾಸಕರು ಅಗತ್ಯ ಮಾಹಿತಿ ಪಡೆದರು. ಸಕಾಲಕ್ಕೆ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ನಿರ್ದೇಶಿಸಿದರು.</p>.<p>ಪ್ರತಿ ಮನೆಗೆ ಶುದ್ಧ ನೀರು ಸರಬರಾಜು ಮಾಡಬೇಕು. ಪ್ರತಿ ದಿನ ಕಾಲೊನಿ, ಹಾಸ್ಟೆಲ್, ಶಾಲಾ-ಕಾಲೇಜು, ಆಸ್ಪತ್ರೆ, ಹೋಟೆಲ್, ಬಸ್ ನಿಲ್ದಾಣ ಹಾಗೂ ವಿವಿಧೆಡೆ ಇರುವ ಕೊಳವೆ ಬಾವಿ ನೀರು ಪರೀಕ್ಷಿಸಬೇಕು. ಇದಕ್ಕಾಗಿ ಪಿಎನ್ಆರ್ ಪಾಳ್ಯದಲ್ಲಿ ಪ್ರಯೋಗಾಲಯ ಆರಂಭಿಸಲಾಗಿದೆ. ಇಲ್ಲಿ ಪರೀಕ್ಷೆ ಮಾಡಿಸಬೇಕು ಎಂದರು.</p>.<p>ಕುಡಿಯುವ ನೀರು ಪೈಪ್ಲೈನ್ಗೆ ಯುಜಿಡಿ ನೀರು ಸೇರದಂತೆ ನೋಡಿಕೊಳ್ಳಬೇಕು. ನೀರು ಕುಡಿಯಲು ಯೋಗ್ಯವೇ ಎಂಬುವುದನ್ನು ಖಚಿತ ಪಡಿಸಿಕೊಂಡ ನಂತರವೇ ಪೂರೈಕೆ ಮಾಡಬೇಕು ಎಂದು ಹೇಳಿದರು.</p>.<p>ಮಹಾನಗರ ಪಾಲಿಕೆ ಆಯುಕ್ತ ಸಿ.ಯೋಗಾನಂದ, ಉಪ ಆಯುಕ್ತ ಮನು, ಆರೋಗ್ಯಾಧಿಕಾರಿ ಡಾ.ಯೋಗೀಶ್, ಎಂಜಿನಿಯರ್ಗಳಾದ ಸಂದೀಪ್, ವಿನಯ್, ಅನಿಲ್, ಪ್ರವೀಣ್ ಇತರರು ಹಾಜರಿದ್ದರು.</p>.ತುಮಕೂರು: ನಗರದಲ್ಲಿ 30 ಕಡೆ ನೀರು ಕಲುಷಿತ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>