<p><strong>ತುಮಕೂರು</strong>: ಇಲ್ಲಿನ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಭಿಕ್ಷಾಟನೆಗೆ ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್. ಬಸವರಾಜು ಅವರು ಮಹಿಳೆಯರ ಜೋಳಿಗೆಗೆ ದಾನ ನೀಡುವ ಮೂಲಕ ಚಾಲನೆ ನೀಡಿದರು.</p>.<p>ಸಾಯಿಬಾಬಾ ದೇವಾಲಯದಿಂದ ಆರಂಭವಾದ ಭಿಕ್ಷಾಟನೆ ಕಾರ್ಯಕ್ರಮ ಸದಾಶಿವನಗರ, ಸರಸ್ವತಿಪುರಂ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ನಡೆಯಿತು.</p>.<p>ನಾಳೆಯ ಗುರುಪೂರ್ಣಿಮೆ ಪ್ರಯುಕ್ತ ಈ ಭಿಕ್ಷಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿಯವರು ತಿಳಿಸಿದರು.</p>.<p>ಭಿಕ್ಷಾಟನೆ ಕಾರ್ಯಕ್ರಮದಲ್ಲಿ ದೇವಾಲಯದ ಕೆ.ಎಲ್.ಗುರುಸಿದ್ದಪ್ಪ, ರಾಮಚಂದ್ರಪ್ಪ, ಧನಿಯಾಕುಮಾರ್, ಸತ್ಯಮಂಗಲದ ಸದಣ್ಣ, ವೇಣುಗೋಪಾಲ್, ರಮೇಶ್ ನಿಸರ್ಗ, ಎ.ಆರ್.ನಾಗರಾಜು, ನೇರಳಾಪುರ ಕುಮಾರ್, ವಿಜಯಕುಮಾರ್, ಶಿವಕುಮಾರ್, ಗೋಪಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಇಲ್ಲಿನ ಕುಣಿಗಲ್ ರಸ್ತೆಯಲ್ಲಿರುವ ರಾಮಕೃಷ್ಣ ನಗರದ ಶಿರಡಿ ಸಾಯಿನಾಥ ಸೇವಾ ಸಮಿತಿ ವತಿಯಿಂದ ಗುರುಪೂರ್ಣಿಮೆ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಭಿಕ್ಷಾಟನೆಗೆ ಕಾರ್ಯಕ್ರಮಕ್ಕೆ ಸಂಸದ ಜಿ.ಎಸ್. ಬಸವರಾಜು ಅವರು ಮಹಿಳೆಯರ ಜೋಳಿಗೆಗೆ ದಾನ ನೀಡುವ ಮೂಲಕ ಚಾಲನೆ ನೀಡಿದರು.</p>.<p>ಸಾಯಿಬಾಬಾ ದೇವಾಲಯದಿಂದ ಆರಂಭವಾದ ಭಿಕ್ಷಾಟನೆ ಕಾರ್ಯಕ್ರಮ ಸದಾಶಿವನಗರ, ಸರಸ್ವತಿಪುರಂ ಸೇರಿದಂತೆ ನಗರದ ವಿವಿಧ ಬಡಾವಣೆಗಳಲ್ಲಿ ನಡೆಯಿತು.</p>.<p>ನಾಳೆಯ ಗುರುಪೂರ್ಣಿಮೆ ಪ್ರಯುಕ್ತ ಈ ಭಿಕ್ಷಾಟನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ದೇವಾಲಯ ಸಮಿತಿಯವರು ತಿಳಿಸಿದರು.</p>.<p>ಭಿಕ್ಷಾಟನೆ ಕಾರ್ಯಕ್ರಮದಲ್ಲಿ ದೇವಾಲಯದ ಕೆ.ಎಲ್.ಗುರುಸಿದ್ದಪ್ಪ, ರಾಮಚಂದ್ರಪ್ಪ, ಧನಿಯಾಕುಮಾರ್, ಸತ್ಯಮಂಗಲದ ಸದಣ್ಣ, ವೇಣುಗೋಪಾಲ್, ರಮೇಶ್ ನಿಸರ್ಗ, ಎ.ಆರ್.ನಾಗರಾಜು, ನೇರಳಾಪುರ ಕುಮಾರ್, ವಿಜಯಕುಮಾರ್, ಶಿವಕುಮಾರ್, ಗೋಪಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>