<p><strong>ಕುಣಿಗಲ್</strong>: ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಎಲ್ಲ ಕೃಷಿಕರಿಗೂ ತಲುಪಿಸಿ, ನಂತರ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಪಡೆದು ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕ ಡಾ.ರಂಗನಾಥ್ ಹೇಳಿದರು.</p>.<p>ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕೃಷಿಕರಿಗೆ ಸರ್ಕಾರಿ ಸೌಲಭ್ಯಗಳು ಅನೇಕ ಇಲಾಖೆಗಳಿಂದ ನೀಡಲಾಗುತ್ತಿದ್ದು, ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸರ್ಕಾರಿ ಸೌಲಭ್ಯಗಳನ್ನು ವಿತರಿಸ ಬೇಕಾಗಿದೆ. ಸೌಲಭ್ಯಗಳು ಉಳ್ಳವರಿಗೆ ದೊರೆಯುತ್ತಿದೆ. ಅರ್ಹ ಬಡ ಫಲಾನುಭವಿಗಳಿಗೂ ದೊರೆಯುವ ವ್ಯವಸ್ಥೆಯಾಗಬೇಕಿದೆ ಎಂದರು.</p>.<p>ಕೃಷಿ ಅಭಿಯಾನದ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಂತ್ರಿಕತೆ, ವೈಜ್ಞಾನಿಕ ಪದ್ಧತಿಗಳ ಬಗ್ಗೆಯೂ ಮಾಹಿತಿ ನೀಡಬೇಕಿದೆ. ರಸಗೊಬ್ಬರ ವ್ಯಾಪಾರಿಗಳಿಂದ ಅನ್ಯಾಯವಾಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ<br />ನೀಡಿದರು.</p>.<p>ಸಹಾಯಕ ಕೃಷಿ ನಿರ್ಧೇಶಕಿ ಸೌಮ್ಯಶ್ರೀ, ತೋಟಗಾರಿಕೆ<br />ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು ಇದ್ದರು. ಅರ್ಹ ಫಲಾನುಭವಿಗಳಿಗೆ ಸೈಕಲ್ ಗ್ರೀಡ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ಕೃಷಿ ಇಲಾಖೆಯ ಸೌಲಭ್ಯಗಳ ಮಾಹಿತಿ ಎಲ್ಲ ಕೃಷಿಕರಿಗೂ ತಲುಪಿಸಿ, ನಂತರ ಅಗತ್ಯ ದಾಖಲೆಗಳನ್ನು ಸಕಾಲದಲ್ಲಿ ಪಡೆದು ಸೌಲಭ್ಯ ವಿತರಣೆಗೆ ಮುಂದಾಗಬೇಕು ಎಂದು ಅಧಿಕಾರಿಗಳಿಗೆ ಶಾಸಕ ಡಾ.ರಂಗನಾಥ್ ಹೇಳಿದರು.</p>.<p>ಪಟ್ಟಣದ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಮುಂದೆ ಕೃಷಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.</p>.<p>ಕೃಷಿಕರಿಗೆ ಸರ್ಕಾರಿ ಸೌಲಭ್ಯಗಳು ಅನೇಕ ಇಲಾಖೆಗಳಿಂದ ನೀಡಲಾಗುತ್ತಿದ್ದು, ಅಧಿಕಾರಿಗಳು ಸಮನ್ವಯತೆ ಸಾಧಿಸಿ ಸರ್ಕಾರಿ ಸೌಲಭ್ಯಗಳನ್ನು ವಿತರಿಸ ಬೇಕಾಗಿದೆ. ಸೌಲಭ್ಯಗಳು ಉಳ್ಳವರಿಗೆ ದೊರೆಯುತ್ತಿದೆ. ಅರ್ಹ ಬಡ ಫಲಾನುಭವಿಗಳಿಗೂ ದೊರೆಯುವ ವ್ಯವಸ್ಥೆಯಾಗಬೇಕಿದೆ ಎಂದರು.</p>.<p>ಕೃಷಿ ಅಭಿಯಾನದ ಮೂಲಕ ತಾಲ್ಲೂಕಿನ ಪ್ರತಿ ಗ್ರಾಮಪಂಚಾಯಿತಿ ಮಟ್ಟದಲ್ಲಿ ರೈತರೊಂದಿಗೆ ಸಂವಾದ ಕಾರ್ಯಕ್ರಮ ಹಮ್ಮಿಕೊಂಡು ರೈತರ ಸಮಸ್ಯೆಗಳಿಗೆ ಪರಿಹಾರ ಮತ್ತು ತಾಂತ್ರಿಕತೆ, ವೈಜ್ಞಾನಿಕ ಪದ್ಧತಿಗಳ ಬಗ್ಗೆಯೂ ಮಾಹಿತಿ ನೀಡಬೇಕಿದೆ. ರಸಗೊಬ್ಬರ ವ್ಯಾಪಾರಿಗಳಿಂದ ಅನ್ಯಾಯವಾಗದಂತೆ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ<br />ನೀಡಿದರು.</p>.<p>ಸಹಾಯಕ ಕೃಷಿ ನಿರ್ಧೇಶಕಿ ಸೌಮ್ಯಶ್ರೀ, ತೋಟಗಾರಿಕೆ<br />ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜು ಇದ್ದರು. ಅರ್ಹ ಫಲಾನುಭವಿಗಳಿಗೆ ಸೈಕಲ್ ಗ್ರೀಡ್ ವಿತರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>