ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕಲ್ಲುಮನೆ ಎ.ಎಸ್. ನಂಜಪ್ಪ ಮೃದಂಗ ನುಡಿಸುವ ಮೂಲಕ ಶಿಬಿರಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಎಸ್. ನಂದಕುಮಾರ್, ಸೊಗಡು ಜನಪದ ಹೆಜ್ಜೆ ಅಧ್ಯಕ್ಷ ಗುರುಮೂರ್ತಿ, ಭಾಗವತರಾದ ಪುಟ್ಟಸ್ವಾಮಿ, ಕಾಂತರಾಜು, ಸಂಗೀತ ಶಿಕ್ಷಕಿ ಸ್ವರ್ಣ ರಮೇಶ್, ಉಪನ್ಯಾಸಕ ಡಾ.ಎಲ್.ಎಂ. ವೆಂಕಟೇಶ್, ಹಿರಿಯ ಮೇಲ್ವಿಚಾರಕಿ ಮೀನಾಕ್ಷಿ ಬಟ್ಟೂರು, ಬಿ.ಎನ್. ಪ್ರೇಮಾ, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.