ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸರಳ ನಿಡಗಲ್ ಉತ್ಸವಕ್ಕೆ ಚಾಲನೆ- ಸರ್ಕಾರದಿಂದ ಆಚರಿಸಲು ಸ್ವಾಮೀಜಿ ಒತ್ತಾಯ

Last Updated 7 ಸೆಪ್ಟೆಂಬರ್ 2021, 5:13 IST
ಅಕ್ಷರ ಗಾತ್ರ

ಪಾವಗಡ: ಸರ್ಕಾರದಿಂದ ನಿಡಗಲ್ ಉತ್ಸವ ಆಚರಿಸಲು ಆದೇಶ ನೀಡಬೇಕು ಎಂದು ವಾಲ್ಮೀಕಿ ಗುರುಪೀಠದ ಅಧ್ಯಕ್ಷ ವಾಲ್ಮೀಕಿ ಸಂಜಯ್ ಕುಮಾರ್ ಸ್ವಾಮೀಜಿ ಮನವಿ ಮಾಡಿದರು.

ತಾಲ್ಲೂಕಿನ ನಿಡಗಲ್ ದುರ್ಗದಲ್ಲಿ ಶ್ರಾವಣ ಸೋಮವಾರದ ಪ್ರಯುಕ್ತ ನಡೆದ ನಿಡಗಲ್ ಉತ್ಸವಕ್ಕೆ ಅವರು ಮಾತನಾಡಿದರು.

ನಿಡಗಲ್ ದುರ್ಗ ಕಲೆ, ಸಾಹಿತ್ಯ, ಶಿಲ್ಪಕಲೆಗೆ ಹೆಸರುವಾಸಿಯಾಗಿದೆ. ಇಂತಹ ಐತಿಹಾಸಿಕ ಪ್ರದೇಶವನ್ನು ಸರ್ಕಾರ ಅಭಿವೃದ್ಧಿಪಡಿಸಿ ಪ್ರವಾಸೋದ್ಯಮ ಕ್ಷೇತ್ರವಾಗಿ ಘೋಷಿಸಬೇಕು. ಐತಿಹಾಸಿಕ ಸ್ಮಾರಕಗಳನ್ನು ರಕ್ಷಿಸಿ ಮುಂದಿನ ಪೀಳಿಗೆಗೆ ಉಳಿಸಬೇಕು ಎಂದು ಹೇಳಿದರು.

ಸಂಘ, ಸಂಸ್ಥೆಗಳು ಪ್ರತಿವರ್ಷ ನಿಡಗಲ್ ಉತ್ಸವ ನಡೆಸುತ್ತಿರುವುದು ಶ್ಲಾಘನೀಯ. ಹಲವು ವರ್ಷಗಳಿಂದ ಸರ್ಕಾರಕ್ಕೆ ಉತ್ಸವ ನಡೆಸಲು ಆದೇಶ ನೀಡುವಂತೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಈ ಬಗ್ಗೆ ಗಮನಹರಿಸಬೇಕು ಎಂದು ಒತ್ತಾಯಿಸಿದರು.

ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಲೋಕೇಶ್ ಪಾಳೆಗಾರ, ನಿಡಗಲ್ಲು ಹೋಬಳಿ ಘಟಕದ ಅಧ್ಯಕ್ಷ ಓಂಕಾರ ನಾಯಕ ಮಾತನಾಡಿದರು.

ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಅನಿಲ್ ಕುಮಾರ್, ದೀಪು ರಾಘವೇಂದ್ರ, ನಾಗೇಂದ್ರ ಕುಮಾರ್, ವಿಜಿ ಪಾಳೆಗಾರ, ಕೆ.ಟಿ. ಹಳ್ಳಿ ನಾಗರಾಜು, ಡಾ.ಕಿರಣ್, ಮಾನಂ ಶಶಿಕಿರಣ್, ಮಂಜುನಾಥ್, ಲಿಂಗಪ್ಪ, ಎಸ್.ಆರ್. ಪಾಳ್ಯದ ಹನುಮಂತರಾಯಪ್ಪ ಅವರನ್ನು ಅಭಿನಂದಿಸಲಾಯಿತು.

ಭಕ್ತಾದಿಗಳು ನಿಡಗಲ್ ದುರ್ಗದ ವಿವಿಧ ದೇಗುಲಗಳಲ್ಲಿ ಪೂಜೆ ಸಲ್ಲಿಸಿದರು. ರಾಮತೀರ್ಥದಲ್ಲಿ ಗಂಗಾಪೂಜೆ ನೆರವೇರಿಸಿದರು. ಯುವಜನತೆ ನಿಡಗಲ್ ಬೆಟ್ಟ ಹತ್ತಿ ಹರಿಕೆ ತೀರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT