ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತುಮಕೂರು: ಅಪಘಾತದಲ್ಲಿ ಬಸ್ ಚಾಲಕ ಸಾವು

Last Updated 4 ಮೇ 2022, 6:19 IST
ಅಕ್ಷರ ಗಾತ್ರ

ತುಮಕೂರು: ರಾಷ್ಟ್ರೀಯ ಹೆದ್ದಾರಿ-48ರ ಶಿರಾ ತಾಲ್ಲೂಕಿನ ಶೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಖಾಸಗಿ ಬಸ್ ಹಾಗೂ ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ ಬಸ್ ಚಾಲಕ ಉದಯಕುಮಾರ್ (32) ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ತುಮಕೂರಿನಿಂದ ಶಿರಾ ಕಡೆಗೆ ವೇಗವಾಗಿ ಬರುತ್ತಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದು, ಎದುರಿಗೆ ಬರುತ್ತಿದ್ದ ಲಾರಿಗೆ ಗುದ್ದಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದಿದೆ.

ಬಸ್ ಚಾಲಕ ಅಥಣಿ ಪಟ್ಟಣದ ಉದಯಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಸೇರಿದಂತೆ ಬಸ್ಸಿನಲ್ಲಿದ್ದ 10 ಮಂದಿ ಗಾಯಗೊಂಡಿದ್ದು ತುಮಕೂರು ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳ್ಳಂಬೆಳ್ಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT