ತುಮಕೂರು: ನಿಂತಿದ್ದ ಲಾರಿಗೆ ಕ್ಯಾಂಟರ್ ಡಿಕ್ಕಿ ಹೊಡೆದು ಕ್ಯಾಂಟರ್ ಚಾಲಕ ಮೃತಪಟ್ಟ ಘಟನೆ ಶನಿವಾರ ಬೆಳಗಿನ ಜಾವ ಕುಣಿಗಲ್ ಸಮೀಪದ ರಾಷ್ಟ್ರೀಯ ಹೆದ್ದಾರಿ–75ರ ಗವಿಮಠ ಸಮೀಪ ನಡೆದಿದೆ.
ನೆಲಮಂಗಲದ ವೆಂಕಟೇಶ (45) ಮೃತರು. ಗಾಯಗೊಂಡಿರುವ ಹನುಮಂತರಾಯಪ್ಪ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಕ್ಯಾಂಟರ್ ಡಿಕ್ಕಿ ಹೊಡೆದ ನಂತರ ಲಾರಿ ಚಾಲಕ ಲಾರಿಯನ್ನು ತೆಗೆದುಕೊಂಡು ಹೋಗಿದ್ದಾರೆ. ಕುಣಿಗಲ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.