<p><strong>ಶಿರಾ</strong>: ಬರಪೀಡಿತ ತಾಲ್ಲೂಕಿನ ರೈತರು ಹಾಲು ಉತ್ಪಾದನೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಕ್ಷೀರಕ್ರಾಂತಿ ಮಾಡಿರುವುದು ಸಂತಸದ ವಿಷಯ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ತುಮಕೂರು ಹಾಲು ಒಕ್ಕೂಟದಿಂದ ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಡೈರಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ತಾಲ್ಲೂಕಿನಲಿ ಪ್ರತಿನಿತ್ಯ ಸುಮಾರು 50 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವುದು ಸಂತೋಷದ ವಿಷಯ. ಹಾಲು ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಿಸಿದರೆ ರೈತರಿಗೆ ಹೆಚ್ಚು ಲಾಭವಿರುವುದು ಎಂದರು.</p>.<p>ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ‘ಇತ್ತೀಚೆಗೆ ಹಾಲು ಮಾರಾಟದಲ್ಲಿ ಚೇತರಿಕೆ ಕಾಣುತ್ತಿದೆ. ತುಮುಲ್ ಶಿರಾದಲ್ಲಿ ₹1.17 ಕೋಟಿ ವೆಚ್ಚದಲ್ಲಿ ಕ್ಷೀರಭವನದ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮುಲ್ಗೆ ಸೇರಿದ ಜಮೀನಿದ್ದು ಅಲ್ಲಿ ಹೈಟೆಕ್ ಮಿಲ್ಕ್ ಪಾರ್ಲರ್ ತೆರೆಯುವ ಯೋಜನೆ ಇದೆ’ ಎಂದರು</p>.<p>ತುಮುಲ್ ಅಧ್ಯಕ್ಷ ಮಹಲಿಂಗಪ್ಪ ಮಾತನಾಡಿ, ‘ಕೊರೊನಾದಿಂದಾಗಿ ತುಮುಲ್ ಸಂಕಷ್ಟದಲ್ಲಿದೆ. ನಿತ್ಯ ₹8 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಮಾರಾಟ ಈಗ ಚೇತರಿಕೆ ಕಾಣುತ್ತಿರುವುದು ಸಂತಸದ ವಿಷಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯೆ ಅಂಬುಜಾ ಎಸ್.ಆರ್.ಗೌಡ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಈರಣ್ಣ, ತುಮುಲ್ ಉಪ ವ್ಯವಸ್ಥಾಪಕ ವೀರಣ್ಣ, ಸಹಾಯಕ ವ್ಯವಸ್ಥಾಪಕ ಮಧುಸೂದನ್, ತಿಪ್ಪೇಸ್ವಾಮಿ, ದಿವಾಕರ್, ಪವನ್, ಬರಗೂರು ಶಿವಕುಮಾರ್, ಹೊನ್ನೇಶ್ ಗೌಡ, ನಿಡಗಟ್ಟೆ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ</strong>: ಬರಪೀಡಿತ ತಾಲ್ಲೂಕಿನ ರೈತರು ಹಾಲು ಉತ್ಪಾದನೆಯಲ್ಲಿ ಉತ್ತಮ ಸಾಧನೆ ಮಾಡುವ ಮೂಲಕ ಕ್ಷೀರಕ್ರಾಂತಿ ಮಾಡಿರುವುದು ಸಂತಸದ ವಿಷಯ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ.ಗೌಡ ಹೇಳಿದರು.</p>.<p>ನಗರದ ಅಂಬೇಡ್ಕರ್ ಭವನದಲ್ಲಿ ತುಮಕೂರು ಹಾಲು ಒಕ್ಕೂಟದಿಂದ ಹಮ್ಮಿಕೊಂಡಿದ್ದ ಕ್ಯಾಲೆಂಡರ್ ಬಿಡುಗಡೆ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಡೈರಿ ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.</p>.<p>ತಾಲ್ಲೂಕಿನಲಿ ಪ್ರತಿನಿತ್ಯ ಸುಮಾರು 50 ಸಾವಿರ ಲೀಟರ್ ಹಾಲು ಉತ್ಪಾದನೆಯಾಗುತ್ತಿರುವುದು ಸಂತೋಷದ ವಿಷಯ. ಹಾಲು ಉತ್ಪನ್ನಗಳ ಮಾರುಕಟ್ಟೆಯನ್ನು ವಿಸ್ತರಿಸಿದರೆ ರೈತರಿಗೆ ಹೆಚ್ಚು ಲಾಭವಿರುವುದು ಎಂದರು.</p>.<p>ರೇಷ್ಮೆ ಉದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷ ಎಸ್.ಆರ್.ಗೌಡ ಮಾತನಾಡಿ, ‘ಇತ್ತೀಚೆಗೆ ಹಾಲು ಮಾರಾಟದಲ್ಲಿ ಚೇತರಿಕೆ ಕಾಣುತ್ತಿದೆ. ತುಮುಲ್ ಶಿರಾದಲ್ಲಿ ₹1.17 ಕೋಟಿ ವೆಚ್ಚದಲ್ಲಿ ಕ್ಷೀರಭವನದ ಕಾಮಗಾರಿ ನಡೆಯುತ್ತಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ ತುಮುಲ್ಗೆ ಸೇರಿದ ಜಮೀನಿದ್ದು ಅಲ್ಲಿ ಹೈಟೆಕ್ ಮಿಲ್ಕ್ ಪಾರ್ಲರ್ ತೆರೆಯುವ ಯೋಜನೆ ಇದೆ’ ಎಂದರು</p>.<p>ತುಮುಲ್ ಅಧ್ಯಕ್ಷ ಮಹಲಿಂಗಪ್ಪ ಮಾತನಾಡಿ, ‘ಕೊರೊನಾದಿಂದಾಗಿ ತುಮುಲ್ ಸಂಕಷ್ಟದಲ್ಲಿದೆ. ನಿತ್ಯ ₹8 ಲಕ್ಷ ಲೀಟರ್ ಹಾಲು ಶೇಖರಣೆಯಾಗುತ್ತಿದೆ. ಮಾರಾಟ ಈಗ ಚೇತರಿಕೆ ಕಾಣುತ್ತಿರುವುದು ಸಂತಸದ ವಿಷಯ’ ಎಂದರು.</p>.<p>ಜಿಲ್ಲಾ ಪಂಚಾಯಿತಿ ಸದಸ್ಯೆ ಅಂಬುಜಾ ಎಸ್.ಆರ್.ಗೌಡ, ಶಿರಾ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಈರಣ್ಣ, ತುಮುಲ್ ಉಪ ವ್ಯವಸ್ಥಾಪಕ ವೀರಣ್ಣ, ಸಹಾಯಕ ವ್ಯವಸ್ಥಾಪಕ ಮಧುಸೂದನ್, ತಿಪ್ಪೇಸ್ವಾಮಿ, ದಿವಾಕರ್, ಪವನ್, ಬರಗೂರು ಶಿವಕುಮಾರ್, ಹೊನ್ನೇಶ್ ಗೌಡ, ನಿಡಗಟ್ಟೆ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>