<p><strong>ಶಿರಾ:</strong> ಮಾದಕ ವಸ್ತುಗಳು ಯುವಜನರ ಬದುಕನ್ನು ಹಾಳು ಮಾಡುತ್ತದೆ. ಈ ಬಗ್ಗೆ ಯುವಕರು ಜಾಗೃತರಾಗಬೇಕು ಎಂದು ಡಿವೈಎಸ್ ಪಿ.ಬಿ.ಕೆ. ಶೇಖರ್ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ಬರಗೂರು ರಾಮಚಂದ್ರಪ್ಪ ಸಭಾಂಗಣದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ, ನಶೆ ಮುಕ್ತ ತುಮಕೂರು ಅಭಿಯಾನ ಮತ್ತು ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಾವು ಕಾನೂನನ್ನು ಗೌರವಿಸಿದರೆ, ಕಾನೂನು ನಮಗೆ ರಕ್ಷಣೆ ನೀಡುತ್ತದೆ. ಸಾರ್ವಜನಿಕರು ಸಮವಸ್ತ್ರವನ್ನು ಧರಿಸದ ಪೊಲೀಸರು ಎಂಬುದನ್ನು ತಿಳಿಯಬೇಕು’ ಎಂದರು.</p>.<p>ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ‘112’ ಕರೆ ಮಾಡಿ, ಸಾರ್ವಜನಿಕರ ಸಹಕಾರದಿಂದ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಸಾಧ್ಯ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಪೊಲೀಸ್ ವ್ಯವಸ್ಥೆಯೇ ಕಾರಣವಾಗಿದೆ ಎಂದರು.</p>.<p>ಮಾದಕ ವಸ್ತು ಸೇವನೆ ಬಗ್ಗೆ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಪಿಎಸ್ಐ ಸುಹೇಲ್ ಅಹಮದ್, ರೇಣುಕಾ ಯಾದವ್, ಡಾ.ತಿಮ್ಮರಾಜು, ಶಾಂತಿನಿಕೇತನ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಪಿ.ಆರ್.ಪ್ರತಿಭಾ ಸತೀಶ್, ರೇಣುಕಾ, ಪ್ರಜ್ವಲ್, ಪಿ.ಬಿ.ಕೀರ್ತಿ ಪ್ರಜ್ವಲ್, ಇಸಿಒ ಕರಿಯಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಮಾದಕ ವಸ್ತುಗಳು ಯುವಜನರ ಬದುಕನ್ನು ಹಾಳು ಮಾಡುತ್ತದೆ. ಈ ಬಗ್ಗೆ ಯುವಕರು ಜಾಗೃತರಾಗಬೇಕು ಎಂದು ಡಿವೈಎಸ್ ಪಿ.ಬಿ.ಕೆ. ಶೇಖರ್ ಹೇಳಿದರು.</p>.<p>ತಾಲ್ಲೂಕಿನ ಪಟ್ಟನಾಯಕನಹಳ್ಳಿ ಶಾಂತಿನಿಕೇತನ ವಿದ್ಯಾಸಂಸ್ಥೆಯ ಬರಗೂರು ರಾಮಚಂದ್ರಪ್ಪ ಸಭಾಂಗಣದಲ್ಲಿ ನಡೆದ ಅಪರಾಧ ತಡೆ ಮಾಸಾಚರಣೆ, ನಶೆ ಮುಕ್ತ ತುಮಕೂರು ಅಭಿಯಾನ ಮತ್ತು ವಿವಿಧ ಸ್ಪರ್ಧೆಯಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.</p>.<p>‘ನಾವು ಕಾನೂನನ್ನು ಗೌರವಿಸಿದರೆ, ಕಾನೂನು ನಮಗೆ ರಕ್ಷಣೆ ನೀಡುತ್ತದೆ. ಸಾರ್ವಜನಿಕರು ಸಮವಸ್ತ್ರವನ್ನು ಧರಿಸದ ಪೊಲೀಸರು ಎಂಬುದನ್ನು ತಿಳಿಯಬೇಕು’ ಎಂದರು.</p>.<p>ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆ ಪಿಎಸ್ಐ ಹರೀಶ್ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಅಕ್ರಮ ಚಟುವಟಿಕೆಗಳು ಕಂಡು ಬಂದರೆ ‘112’ ಕರೆ ಮಾಡಿ, ಸಾರ್ವಜನಿಕರ ಸಹಕಾರದಿಂದ ಜನಸ್ನೇಹಿ ಪೊಲೀಸ್ ವ್ಯವಸ್ಥೆ ನಿರ್ಮಾಣ ಸಾಧ್ಯ ಎಂದರು.</p>.<p>ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಬಿ.ಪಿ.ಪಾಂಡುರಂಗಯ್ಯ ಮಾತನಾಡಿ, ಸಮಾಜದಲ್ಲಿ ಶಾಂತಿ ಮತ್ತು ನೆಮ್ಮದಿಯ ಬದುಕಿಗೆ ಪೊಲೀಸ್ ವ್ಯವಸ್ಥೆಯೇ ಕಾರಣವಾಗಿದೆ ಎಂದರು.</p>.<p>ಮಾದಕ ವಸ್ತು ಸೇವನೆ ಬಗ್ಗೆ ಪೊಲೀಸ್ ಇಲಾಖೆ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.</p>.<p>ಕ್ಷೇತ್ರ ಶಿಕ್ಷಣಾಧಿಕಾರಿ ಕೃಷ್ಣಪ್ಪ, ಪಿಎಸ್ಐ ಸುಹೇಲ್ ಅಹಮದ್, ರೇಣುಕಾ ಯಾದವ್, ಡಾ.ತಿಮ್ಮರಾಜು, ಶಾಂತಿನಿಕೇತನ ವಿದ್ಯಾಸಂಸ್ಥೆ ಪ್ರಾಂಶುಪಾಲೆ ಪಿ.ಆರ್.ಪ್ರತಿಭಾ ಸತೀಶ್, ರೇಣುಕಾ, ಪ್ರಜ್ವಲ್, ಪಿ.ಬಿ.ಕೀರ್ತಿ ಪ್ರಜ್ವಲ್, ಇಸಿಒ ಕರಿಯಣ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>