ಗದಗ: ಮಹದಾಯಿ ವಿಷಯದಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ರೈತರಿಗೆ ಮೋಸ ಮಾಡಿವೆ ಎಂದು ಆರೋಪಿಸಿರುವ ರೈತ ಸೇನೆ ರಾಜ್ಯ ಘಟಕದ ಅಧ್ಯಕ್ಷ ವೀರೇಶ ಸೊಬರದಮಠ, ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ 11 ತಾಲ್ಲೂಕುಗಳ ರೈತರು, ಹೋರಾಟಗಾರರು ‘ನೋಟಾ’ ಚಲಾಯಿಸಲು ನಿರ್ಧರಿಸಿರುವುದಾಗಿ ಹೇಳಿದರು.