<p><strong>ತುಮಕೂರು</strong>: ಚಿನ್ನದ ವ್ಯಾಪಾರದಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಅಧಿಕ ಲಾಭಾಂಶ ನೀಡಲಾಗುವುದು ಎಂಬ ಬೆಂಗಳೂರು ಉದ್ಯಮಿಯೊಬ್ಬರ ಮಾತಿಗೆ ಮರುಳಾದ ನಗರದ ನಾಲ್ವರು ಉದ್ಯಮಿಗಳು ₹7.75 ಕೋಟಿ ಕಳೆದುಕೊಂಡಿದ್ದಾರೆ.</p>.<p>ನಗರದ ಬಾರ್ಲೈನ್ ರಸ್ತೆಯ ಅಕ್ಬರ್ ಇಲಿಯಾಜ್ ಅಹ್ಮದ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಉದ್ಯಮಿ ಅಬ್ದುಲ್ ಕರೀಂ, ಪತ್ನಿ ಜೀನತ್, ಮಗ ಮಹ್ಮದ್ ಇಬ್ರಾಹಿಂ, ಮಗಳು ಖತೀಜಾ ಫಿಜಾ, ಅಳಿಯ ರಿಜ್ವಾನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಂಚನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಿವರ ಪಡೆಯಲಾಗುವುದು. ವಂಚಿಸಿದ ಉದ್ಯಮಿ ದುಬೈನಲ್ಲಿ ಇರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ದುಬೈನಲ್ಲಿ ಆರೋಪಿ</strong></p><p>ವಂಚನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಿವರ ಪಡೆಯಲಾಗುವುದು. ವಂಚಿಸಿದ ಉದ್ಯಮಿ ದುಬೈನಲ್ಲಿ ಇರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಆರೋಪಿ ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಹಣ ಕೇಳಿದ್ದಾರೆ. ಹೆಚ್ಚಿನ ಲಾಭ ನೀಡಲಾಗುವುದು ಎಂದು ನಂಬಿಸಲು ಮೊದಲು ಒಂದಷ್ಟು ಹಣ ವಾಪಸ್ ಕೊಟ್ಟಿದ್ದಾರೆ. ಇದನ್ನು ನೋಡಿ ಉಳಿದವರು ಸಹ ಹೂಡಿಕೆ ಮಾಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಚಿನ್ನದ ವ್ಯಾಪಾರದಲ್ಲಿ ಹಣ ಹೂಡಿಕೆ ಮಾಡಿದರೆ ಪ್ರತಿ ತಿಂಗಳು ಅಧಿಕ ಲಾಭಾಂಶ ನೀಡಲಾಗುವುದು ಎಂಬ ಬೆಂಗಳೂರು ಉದ್ಯಮಿಯೊಬ್ಬರ ಮಾತಿಗೆ ಮರುಳಾದ ನಗರದ ನಾಲ್ವರು ಉದ್ಯಮಿಗಳು ₹7.75 ಕೋಟಿ ಕಳೆದುಕೊಂಡಿದ್ದಾರೆ.</p>.<p>ನಗರದ ಬಾರ್ಲೈನ್ ರಸ್ತೆಯ ಅಕ್ಬರ್ ಇಲಿಯಾಜ್ ಅಹ್ಮದ್ ನೀಡಿದ ದೂರಿನ ಮೇರೆಗೆ ಬೆಂಗಳೂರಿನ ಉದ್ಯಮಿ ಅಬ್ದುಲ್ ಕರೀಂ, ಪತ್ನಿ ಜೀನತ್, ಮಗ ಮಹ್ಮದ್ ಇಬ್ರಾಹಿಂ, ಮಗಳು ಖತೀಜಾ ಫಿಜಾ, ಅಳಿಯ ರಿಜ್ವಾನ್ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<p>ವಂಚನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಿವರ ಪಡೆಯಲಾಗುವುದು. ವಂಚಿಸಿದ ಉದ್ಯಮಿ ದುಬೈನಲ್ಲಿ ಇರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p><strong>ದುಬೈನಲ್ಲಿ ಆರೋಪಿ</strong></p><p>ವಂಚನೆ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬ್ಯಾಂಕ್ ವಿವರ ಪಡೆಯಲಾಗುವುದು. ವಂಚಿಸಿದ ಉದ್ಯಮಿ ದುಬೈನಲ್ಲಿ ಇರುವುದು ಗೊತ್ತಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.</p><p>‘ಆರೋಪಿ ಚಿನ್ನದ ವ್ಯಾಪಾರದಲ್ಲಿ ಹೂಡಿಕೆ ಮಾಡಲು ಹಣ ಕೇಳಿದ್ದಾರೆ. ಹೆಚ್ಚಿನ ಲಾಭ ನೀಡಲಾಗುವುದು ಎಂದು ನಂಬಿಸಲು ಮೊದಲು ಒಂದಷ್ಟು ಹಣ ವಾಪಸ್ ಕೊಟ್ಟಿದ್ದಾರೆ. ಇದನ್ನು ನೋಡಿ ಉಳಿದವರು ಸಹ ಹೂಡಿಕೆ ಮಾಡಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಪ್ರತಿಕ್ರಿಯಿಸಿದರು.</p> .<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>