ರಾಜ್ಯದಲ್ಲಿ 2.5 ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇವೆ. ಅವುಗಳ ಭರ್ತಿಗೆ ಮುಂದಾಗುತ್ತಿಲ್ಲ. ವಿದ್ಯಾಭ್ಯಾಸ ಮುಗಿಸಿದ ಯುವಕರಿಗೆ ಉದ್ಯೋಗ ಸಿಗುತ್ತಿಲ್ಲ. ರಾಜಕೀಯ ಪಕ್ಷಗಳು ತಮ್ಮ ಸ್ವ ಹಿತಾಸಕ್ತಿಗಾಗಿ ಜಾತಿ, ಭಾಷೆ, ಧರ್ಮದ ಹೆಸರಿನಲ್ಲಿ ಯುವ ಸಮೂಹವನ್ನು ದಿಕ್ಕು ತಪ್ಪಿಸುತ್ತಿದ್ದು, ಎಲ್ಲರು ಜಾಗೃತರಾಗಬೇಕು ಎಂದು ಎಚ್ಚರಿಸಿದರು.