<p><strong>ತುಮಕೂರು</strong>: ಜಿಲ್ಲೆಯ ಎಲ್ಲ ಛಾಯಾಗ್ರಾಹಕರಿಗೆ ಇ-ಶ್ರಮ್ ಕಾರ್ಡ್ ನೀಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.</p>.<p>ನಗರ ಹೊರವಲಯದ ಭೀಮಸಂದ್ರದಲ್ಲಿ ಶನಿವಾರ ಜಿಲ್ಲಾ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಛಾಯಾಗ್ರಾಹಕರ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಫೋಟೋಗ್ರಾಫರ್ಗಳು ಸಂಸ್ಕೃತಿಯ ಕಾವಲುಗಾರರು. ಫೋಟೋಗ್ರಫಿ ಜನರ ಹೃದಯ ಮುಟ್ಟುವಂತಿರಬೇಕು. ಎಲ್ಲ ಕಾರ್ಯಕ್ರಮ ಶಾಶ್ವತವಾಗಿ ನಮ್ಮ ನೆನಪಿನಲ್ಲಿ ಉಳಿಯುವಲ್ಲಿ ಫೋಟೋಗ್ರಾಫರ್ಗಳ ಪಾತ್ರ ಬಹು ಮುಖ್ಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.</p>.<p>ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಂ.ಅಂಬಿಕಾ, ‘ಛಾಯಾಗ್ರಾಹಕರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಸಂಘದ ಎಲ್ಲ ಪದಾಧಿಕಾರಿಗಳಿಗೆ ಶ್ರೀದೇವಿ ಆಸ್ಪತ್ರೆಯಿಂದ ಆರೋಗ್ಯ ಕಾರ್ಡ್ ನೀಡಲಾಗುವುದು’ ಎಂದರು.</p>.<p>ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಸ್.ನಾಗೇಶ್, ಜಿಲ್ಲಾ ಫೋಟೊ ಮತ್ತು ವಿಡಿಯೊಗ್ರಾಫರ್ಸ್ ಸಂಘದ ಅಧ್ಯಕ್ಷ ಟಿ.ಎಚ್.ಅನಿಲ್ಕುಮಾರ್, ಪದಾಧಿಕಾರಿಗಳಾದ ಸಂತೋಷ್, ನವೀನ್, ಮೋಹನ್ಕುಮಾರ್, ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ಜಿಲ್ಲೆಯ ಎಲ್ಲ ಛಾಯಾಗ್ರಾಹಕರಿಗೆ ಇ-ಶ್ರಮ್ ಕಾರ್ಡ್ ನೀಡುವಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಹೇಳಿದರು.</p>.<p>ನಗರ ಹೊರವಲಯದ ಭೀಮಸಂದ್ರದಲ್ಲಿ ಶನಿವಾರ ಜಿಲ್ಲಾ ಫೋಟೊ ಮತ್ತು ವಿಡಿಯೋಗ್ರಾಫರ್ಸ್ ಸಂಘದಿಂದ ಹಮ್ಮಿಕೊಂಡಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆ, ಛಾಯಾಗ್ರಾಹಕರ ಜಿಲ್ಲಾ ಸಮಾವೇಶದಲ್ಲಿ ಮಾತನಾಡಿದರು.</p>.<p>ಫೋಟೋಗ್ರಾಫರ್ಗಳು ಸಂಸ್ಕೃತಿಯ ಕಾವಲುಗಾರರು. ಫೋಟೋಗ್ರಫಿ ಜನರ ಹೃದಯ ಮುಟ್ಟುವಂತಿರಬೇಕು. ಎಲ್ಲ ಕಾರ್ಯಕ್ರಮ ಶಾಶ್ವತವಾಗಿ ನಮ್ಮ ನೆನಪಿನಲ್ಲಿ ಉಳಿಯುವಲ್ಲಿ ಫೋಟೋಗ್ರಾಫರ್ಗಳ ಪಾತ್ರ ಬಹು ಮುಖ್ಯ. ಮುಂದಿನ ದಿನಗಳಲ್ಲಿ ಮತ್ತಷ್ಟು ಜವಾಬ್ದಾರಿಯಿಂದ ಕೆಲಸ ಮಾಡಬೇಕು ಎಂದು ಸಲಹೆ ಮಾಡಿದರು.</p>.<p>ಬಿಜೆಪಿ ಮಹಿಳಾ ಮೋರ್ಚಾ ರಾಜ್ಯ ಕಾರ್ಯದರ್ಶಿ ಎಂ.ಅಂಬಿಕಾ, ‘ಛಾಯಾಗ್ರಾಹಕರು ಹೊಸ ತಂತ್ರಜ್ಞಾನ ಅಳವಡಿಸಿಕೊಳ್ಳಬೇಕು. ಸಂಘದ ಎಲ್ಲ ಪದಾಧಿಕಾರಿಗಳಿಗೆ ಶ್ರೀದೇವಿ ಆಸ್ಪತ್ರೆಯಿಂದ ಆರೋಗ್ಯ ಕಾರ್ಡ್ ನೀಡಲಾಗುವುದು’ ಎಂದರು.</p>.<p>ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ರಾಜ್ಯ ಛಾಯಾಚಿತ್ರ ಗ್ರಾಹಕರ ಸಂಘದ ಅಧ್ಯಕ್ಷ ಎಚ್.ಎಸ್.ನಾಗೇಶ್, ಜಿಲ್ಲಾ ಫೋಟೊ ಮತ್ತು ವಿಡಿಯೊಗ್ರಾಫರ್ಸ್ ಸಂಘದ ಅಧ್ಯಕ್ಷ ಟಿ.ಎಚ್.ಅನಿಲ್ಕುಮಾರ್, ಪದಾಧಿಕಾರಿಗಳಾದ ಸಂತೋಷ್, ನವೀನ್, ಮೋಹನ್ಕುಮಾರ್, ರಮೇಶ್ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>