ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಎನ್.ರವಿಕಿರಣ್ ನಿಧನ

Last Updated 25 ಏಪ್ರಿಲ್ 2020, 10:59 IST
ಅಕ್ಷರ ಗಾತ್ರ

ತುಮಕೂರು: ಬೆಂಗಳೂರಿನ ಈಸ್ಟ್ ವೆಸ್ಟ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸಿ.ಎನ್.ರವಿಕಿರಣ್ (49) ಶನಿವಾರ ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾದರು.

ತಾಯಿ, ಪತ್ನಿ ಹಾಗೂ ಇಬ್ಬರು ಪುತ್ರರು ಇದ್ದಾರೆ. ರವಿಕಿರಣ್ ಕುಣಿಗಲ್ ತಾಲ್ಲೂಕಿನ ಅಮೃತೂರು ಹೋಬಳಿಯ ಚಂದನಹಳ್ಳಿ ಗ್ರಾಮದವರು. ಅವರ ತಂದೆ ಚಂದನಹಳ್ಳಿ ನಾಗರಾಜ್ ಬೆಂಗಳೂರು ಮೇಯರ್ ಆಗಿದ್ದರು.

2013ರ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.ಟಿಕೆಟ್ ದೊರೆಯದ ಕಾರಣ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿ 19,000 ಮತಗಳನ್ನು ರವಿಕಿರಣ್ ಪಡೆದಿದ್ದರು.

ಈಸ್ಟ್ ವೆಸ್ಟ್ ಟ್ರಸ್ಟ್ ಮೂಲಕ ಕುಣಿಗಲ್ ತಾಲ್ಲೂಕಿನಲ್ಲಿ ವಿದ್ಯಾರ್ಥಿ ವೇತನ, ವೃದ್ಧರಿಗೆ ಮತ್ತು ಅಶಕ್ತರಿಗೆ ನೆರವಾಗುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದರು. ತಮ್ಮ ಶಿಕ್ಷಣ ಸಂಸ್ಥೆಯಲ್ಲಿ ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಉಚಿತವಾಗಿ ಪ್ರವೇಶ ನೀಡುತ್ತಿದ್ದರು. ಅಂತ್ಯಕ್ರಿಯೆ ಎಲ್ಲಿ ನಡೆಬೇಕು ಎನ್ನುವ ಬಗ್ಗೆ ಇನ್ನೂ ಕುಟುಂಬ ಸದಸ್ಯರು ತೀರ್ಮಾನಕೈಗೊಂಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT