ಆರೋಪಿಯು ನಗರದ ಪೂರ್ ಹೌಸ್ ಕಾಲೋನಿ ಮತ್ತು ಸದಾಶಿವನಗರದಲ್ಲಿ ವಾಸಿಸುತ್ತಿದ್ದ. ನಗರದ ಶಾದಿಮಹಲ್ ಆವರಣದಲ್ಲಿರುವ ಎಚ್.ಎಂ.ಎಸ್ ಕಾಂಪ್ಲೆಕ್ಸ್ನಲ್ಲಿ ತನ್ನ ಕಂಪನಿಯ ಕಚೇರಿ ತೆರೆದಿದ್ದ. ಸಾಮಾನ್ಯ ಹೂಡಿಕೆ, ಶಿಕ್ಷಣ, ಮದುವೆ ಎಂಬ ಮೂರು ಹೆಸರಿನಲ್ಲಿ ಯೋಜನೆಗಳನ್ನು ಜಾರಿಗೆ ತಂದು ಸಾರ್ವಜನಿಕರು ಹಣ ಹೂಡಿಕೆ ಮಾಡುವಂತೆ ಮಾಡಿದ್ದ. ತುಮಕೂರು, ಶಿವಮೊಗ್ಗ, ಮಧುರೈ, ಕೇರಳ ಸೇರಿದಂತೆ ವಿವಿಧ ಕಡೆಯ ಒಂದು ಸಾವಿರಕ್ಕೂ ಹೆಚ್ಚು ಮಂದಿ ಹಣ ಹೂಡಿಕೆ ಮಾಡಿದ್ದಾರೆ ಎಂದು ಹೇಳಿದರು.