’ಕ್ಷೇತ್ರದ ಅಭಿವೃದ್ಧಿಗೆ ₹ 40 ಕೋಟಿ ಮೊತ್ತದ ಕಾಮಗಾರಿ ಕೈಗೊಳ್ಳಲಾಗಿತ್ತು. ದೇವಾಲಯದ ನಡು ಪ್ರಾಂಗಣ, ಪ್ರದಕ್ಷಿಣೆ ಪ್ರಾಂಗಣ ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳುವಷ್ಟರಲ್ಲಿ ಹೈಕೋರ್ಟ್ ತಡೆಯಾಜ್ಞೆ ನೀಡಿತ್ತು. ಬಳಿಕ ಪುರಾತತ್ವ ಇಲಾಖೆಯ ತಜ್ಞರ ಮಾರ್ಗದರ್ಶನದಲ್ಲಿ ದೇವಾಲಯದ ಪ್ರಾಂಗಣದ ಮೂಲ ಸ್ವರೂಪಕ್ಕೆ ಧಕ್ಕೆಯಾಗದ ರೀತಿಯಲ್ಲಿ ನವೀಕರಣ ಮಾಡಬೇಕು ಎಂದು ಆದೇಶಿಸಿತ್ತು. ಆ ಪ್ರಕಾರ ನವೀಕರಣ ಮಾಡಲಾಗಿದೆ’ ಎಂದು ದೇವಾಲಯದ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಸಿ.ಎಲ್.ಶಿವಕುಮಾರ್ ’ಪ್ರಜಾವಾಣಿ’ಗೆ ತಿಳಿಸಿದರು.