<p><strong>ಶಿರಾ:</strong> ಶಿಕ್ಷಣಕ್ಕೆ ಬಡತನ ಎಂದೂ ಅಡ್ಡಿಯಾಗಬಾರದು. ಬಡವರಾಗಿ ಹುಟ್ಟುವುದು ತಪ್ಪಲ್ಲ. ಆದರೆ ಬಡವರಾಗಿ ಹಾಗೂ ಅವಿದ್ಯಾವಂತರಾಗಿ ಬದುಕುವುದು ತಪ್ಪು ಎಂದು ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಪರುಶುರಾಂ ನಾಯ್ಕ ಹೇಳಿದರು.</p>.<p>ನಗರದಲ್ಲಿ ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದಿಂದ ಈಚೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಬಂಜಾರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.</p>.<p>ಸಮಾಜದ ಮುಖಂಡ ಕೆ.ಎನ್.ಶೇಷಾನಾಯ್ಕ ಮಾತನಾಡಿ, ಸರ್ಕಾರ ಬಡವರು ಮತ್ತು ಶೋಷಿತ ಸಮುದಾಯಗಳಿಗೆ ಅನುಕೂಲವಾಗುವಂತೆ ಮೊರಾರ್ಜಿ, ನವೋದಯ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆದಿದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.</p>.<p>ಮುಖ್ಯಶಿಕ್ಷಕ ಮಂಜಾನಾಯ್ಕ, ಸಂಘದ ಗೌರವಾಧ್ಯಕ್ಷ ನಾರಾಯಣ ನಾಯ್ಕ, ನಾನ್ಯಾನಾಯ್ಕ, ರಂಗಸ್ವಾಮಿ ನಾಯ್ಕ, ಪ್ರಧಾನ ಕಾರ್ಯದರ್ಶಿ ರಂಗನಾಯ್ಕ, ಸಂಚಾಲಕ ಮೀಠ್ಯಾನಾಯ್ಕ, ರಂಗನಾಯ್ಕ, ಭೀಮಾನಾಯ್ಕ, ರಾವ್ಯಾನಾಯ್ಕ, ಕುಮಾರನಾಯ್ಕ, ದೇವ್ಲಾನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ಶಿಕ್ಷಣಕ್ಕೆ ಬಡತನ ಎಂದೂ ಅಡ್ಡಿಯಾಗಬಾರದು. ಬಡವರಾಗಿ ಹುಟ್ಟುವುದು ತಪ್ಪಲ್ಲ. ಆದರೆ ಬಡವರಾಗಿ ಹಾಗೂ ಅವಿದ್ಯಾವಂತರಾಗಿ ಬದುಕುವುದು ತಪ್ಪು ಎಂದು ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದ ಅಧ್ಯಕ್ಷ ಪರುಶುರಾಂ ನಾಯ್ಕ ಹೇಳಿದರು.</p>.<p>ನಗರದಲ್ಲಿ ಸೇವಾಲಾಲ್ ಬಂಜಾರ (ಲಂಬಾಣಿ) ಶ್ರೇಯೋಭಿವೃದ್ಧಿ ಸಂಘದಿಂದ ಈಚೆಗೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.</p>.<p>ಶೈಕ್ಷಣಿಕವಾಗಿ ಪ್ರಗತಿ ಸಾಧಿಸಿದಾಗ ಮಾತ್ರ ಬಂಜಾರ ಸಮುದಾಯ ಮುಖ್ಯವಾಹಿನಿಗೆ ಬರಲು ಸಾಧ್ಯ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗಬೇಕು ಎಂದರು.</p>.<p>ಸಮಾಜದ ಮುಖಂಡ ಕೆ.ಎನ್.ಶೇಷಾನಾಯ್ಕ ಮಾತನಾಡಿ, ಸರ್ಕಾರ ಬಡವರು ಮತ್ತು ಶೋಷಿತ ಸಮುದಾಯಗಳಿಗೆ ಅನುಕೂಲವಾಗುವಂತೆ ಮೊರಾರ್ಜಿ, ನವೋದಯ, ಕಿತ್ತೂರು ಚೆನ್ನಮ್ಮ ವಸತಿ ಶಾಲೆಗಳನ್ನು ತೆರೆದಿದೆ. ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯುವ ಮೂಲಕ ಶೈಕ್ಷಣಿಕವಾಗಿ ಪ್ರಗತಿ ಸಾಧಿಸಬೇಕು ಎಂದರು.</p>.<p>ಮುಖ್ಯಶಿಕ್ಷಕ ಮಂಜಾನಾಯ್ಕ, ಸಂಘದ ಗೌರವಾಧ್ಯಕ್ಷ ನಾರಾಯಣ ನಾಯ್ಕ, ನಾನ್ಯಾನಾಯ್ಕ, ರಂಗಸ್ವಾಮಿ ನಾಯ್ಕ, ಪ್ರಧಾನ ಕಾರ್ಯದರ್ಶಿ ರಂಗನಾಯ್ಕ, ಸಂಚಾಲಕ ಮೀಠ್ಯಾನಾಯ್ಕ, ರಂಗನಾಯ್ಕ, ಭೀಮಾನಾಯ್ಕ, ರಾವ್ಯಾನಾಯ್ಕ, ಕುಮಾರನಾಯ್ಕ, ದೇವ್ಲಾನಾಯ್ಕ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>