ಶಿರಾ: ತಾಲ್ಲೂಕಿನ ಪಂಜಿಗಾನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಗೆ ಸೋಮವಾರ ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಎಂ. ರೇವಣ್ಣಸಿದ್ದಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಶಾಲೆಯ ಕಟ್ಟಡ ಶಿಥಿಲವಾಗಿರುವುದನ್ನು ಪರಿಶೀಲಿಸಿದ ಉಪ ನಿರ್ದೇಶಕರು, ಮುಖ್ಯಶಿಕ್ಷಕರು ಹಾಗೂ ಸಹ ಶಿಕ್ಷಕರು ದಾನಿಗಳಿಂದ ಜಮೀನು ಪಡೆದು ಹೊಸ ಶಾಲಾ ಕೊಠಡಿ ನಿರ್ಮಾಣ ಮಾಡುತ್ತಿರುವುದನ್ನು ಗಮನಿಸಿ ಅವರ ಶ್ರಮವನ್ನು ಶ್ಲಾಘಿಸಿದರು.
ವಿದ್ಯಾರ್ಥಿಗಳಲ್ಲಿನ ಕಲಿಕಾ ಮನೋಭಾವ ಹಾಗೂ ತಾವು ಭೇಟಿ ನೀಡಿದ ಸಮಯದಲ್ಲಿ ಬಿಸಿಯೂಟದ ಸಮಯವಾಗಿದ್ದು, ವಿದ್ಯಾರ್ಥಿಗಳು ಶಿಸ್ತಿನಿಂದ ಕುಳಿತಿರುವುದನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದರು.
ಗ್ರಾಮೀಣ ಪ್ರದೇಶದ ಮಕ್ಕಳಿಗೆ ಕಲಿಕೆಗೆ ಪೂರಕವಾಗುವಂತೆ ಶಿಕ್ಷಕರು ಬೋಧನೆ ನಡೆಸುತ್ತಿದೆ. ಇದನ್ನು ಮುಂದುವರಿಸಿಕೊಂಡು ಹೋಗುವಂತೆ ಸೂಚನೆ ನೀಡಿದರು.