<p><strong>ತುಮಕೂರು: </strong>ಇಲ್ಲಿನ ಇಸ್ಮಾಯಿಲ್ ನಗರದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ 64ನೇ ವರ್ಷದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ತುಮಕೂರು ಕೊಳೆಗೇರಿ ಸಮಿತಿ ಗೌರವಾಧ್ಯಕ್ಷರಾದ ದೀಪಿಕಾ, ಅಂಬೇಡ್ಕರ್ ಅವರು ಎಲ್ಲ ಸಮುದಾಯಗಳ ಆಸ್ತಿ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸಮಪಾಲು ಸಮಬಾಳು ಆಶಯವನ್ನು ನೀಡಿದ್ದಾರೆ ಎಂದರು.</p>.<p>ಅಂಬೇಡ್ಕರ್ ಅವರು ಹೇಳಿರುವ ಶಿಕ್ಷಣ, ಸಂಘಟನೆ, ಹೋರಾಟದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ಸಮಿತಿ ಕಾರ್ಯದರ್ಶಿ ಅರುಣ್, ಪರಿನಿರ್ವಾಣ ದಿನದ ವೇಳೆ ತಮ್ಮ ಮಕ್ಕಳಿ ಶಿಕ್ಷಣ ದೊರಕಿಸಿಕೊಡುತ್ತೇವೆ ಎನ್ನುವ ಸಂಕಲ್ಪವನ್ನು ಪೋಷಕರು ಮಾಡಬೇಕು. ಶೋಷಿತರು ರಾಜಕೀಯ ಪಕ್ಷಗಳ ಗುಲಾಮರಾಗದೆ ಸಮಸ್ಯೆಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದರು.</p>.<p>ಇಲ್ಲಿನ 40 ಕುಟುಂಬಗಳ ಹೆಣ್ಣು ಮಕ್ಕಳ ಘನತೆಯ ಬದುಕಿಗೆ ಅಗತ್ಯವಿರುವ ಸಮುದಾಯ ಶೌಚಾಲಯವನ್ನು ನಿರ್ಮಿಸಿಕೊಡುವಲ್ಲಿ ತುಮಕೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯವಹಿಸಿದೆ ಎಂದು ದೂರಿದರು.</p>.<p>ಹಂದಿಜೋಗಿ ಕೊಳೆಗೇರಿ ಶಾಖೆ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಗಂಗಮ್ಮ, ರಾಮಕ್ಕ, ಗೋವಿಂದ ಹಾಗೂ ತುಮಕೂರು ಕೊಳೆಗೇರಿ ಸಮಿತಿಯ ತಿರುಮಲಯ್ಯ, ಧನಂಜಯ್, ಹನುಮಂತ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ಇಲ್ಲಿನ ಇಸ್ಮಾಯಿಲ್ ನಗರದಲ್ಲಿ ಭಾನುವಾರ ಡಾ.ಬಿ.ಆರ್.ಅಂಬೇಡ್ಕರ್ ಪರಿನಿರ್ವಾಣ ದಿನದ 64ನೇ ವರ್ಷದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.</p>.<p>ತುಮಕೂರು ಕೊಳೆಗೇರಿ ಸಮಿತಿ ಗೌರವಾಧ್ಯಕ್ಷರಾದ ದೀಪಿಕಾ, ಅಂಬೇಡ್ಕರ್ ಅವರು ಎಲ್ಲ ಸಮುದಾಯಗಳ ಆಸ್ತಿ. ಎಲ್ಲರಿಗೂ ಸಂವಿಧಾನದ ಅಡಿಯಲ್ಲಿ ಸಮಪಾಲು ಸಮಬಾಳು ಆಶಯವನ್ನು ನೀಡಿದ್ದಾರೆ ಎಂದರು.</p>.<p>ಅಂಬೇಡ್ಕರ್ ಅವರು ಹೇಳಿರುವ ಶಿಕ್ಷಣ, ಸಂಘಟನೆ, ಹೋರಾಟದ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಕ್ಕಳಿಗೆ ಶಿಕ್ಷಣವನ್ನು ಕೊಡಿಸಬೇಕು ಎಂದು ಸಲಹೆ ನೀಡಿದರು.</p>.<p>ಸಮಿತಿ ಕಾರ್ಯದರ್ಶಿ ಅರುಣ್, ಪರಿನಿರ್ವಾಣ ದಿನದ ವೇಳೆ ತಮ್ಮ ಮಕ್ಕಳಿ ಶಿಕ್ಷಣ ದೊರಕಿಸಿಕೊಡುತ್ತೇವೆ ಎನ್ನುವ ಸಂಕಲ್ಪವನ್ನು ಪೋಷಕರು ಮಾಡಬೇಕು. ಶೋಷಿತರು ರಾಜಕೀಯ ಪಕ್ಷಗಳ ಗುಲಾಮರಾಗದೆ ಸಮಸ್ಯೆಗಳನ್ನು ಒಗ್ಗಟ್ಟಿನಿಂದ ಎದುರಿಸಬೇಕು ಎಂದರು.</p>.<p>ಇಲ್ಲಿನ 40 ಕುಟುಂಬಗಳ ಹೆಣ್ಣು ಮಕ್ಕಳ ಘನತೆಯ ಬದುಕಿಗೆ ಅಗತ್ಯವಿರುವ ಸಮುದಾಯ ಶೌಚಾಲಯವನ್ನು ನಿರ್ಮಿಸಿಕೊಡುವಲ್ಲಿ ತುಮಕೂರು ಮಹಾನಗರ ಪಾಲಿಕೆ ನಿರ್ಲಕ್ಷ್ಯವಹಿಸಿದೆ ಎಂದು ದೂರಿದರು.</p>.<p>ಹಂದಿಜೋಗಿ ಕೊಳೆಗೇರಿ ಶಾಖೆ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಗಂಗಮ್ಮ, ರಾಮಕ್ಕ, ಗೋವಿಂದ ಹಾಗೂ ತುಮಕೂರು ಕೊಳೆಗೇರಿ ಸಮಿತಿಯ ತಿರುಮಲಯ್ಯ, ಧನಂಜಯ್, ಹನುಮಂತ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>