<p><strong>ಮಧುಗಿರಿ:</strong> ರಸ್ತೆಯ ಗುಂಡಿ ಮುಚ್ಚಿದ ಶಿಕ್ಷಕ ದಂಪತಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/district/tumakuru/teacher-pothole-repair-madhugiri-682774.html" target="_blank">ರಸ್ತೆ ಮಧ್ಯದ ದೊಡ್ಡ ಗುಂಡಿಯನ್ನು ಮುಚ್ಚಿದ ಶಿಕ್ಷಕ ದಂಪತಿ</a></strong></p>.<p>ತಾಲ್ಲೂಕು ಪುರವರ ಗ್ರಾಮದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯಲ್ಲಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನೋವು ಸಂಭವಿಸಿದ್ದವು. ಈ ವಿಷಯ ತಿಳಿದ ಶಿಕ್ಷಕ ಫಣೀಂದ್ರನಾಥ, ಪತ್ನಿ ಪಿ.ಜಿ.ಇಂದ್ರಮ್ಮ, ಸಿರಿ ಮತ್ತು ಕಲ್ಯಾಣ್ ಶನಿವಾರ ಶಾಲೆ ಮುಗಿಸಿಕೊಂಡು ಜಲ್ಲಿ ಮತ್ತು ಮಣ್ಣಿನಿಂದ ಗುಂಡಿಯನ್ನು ಮುಚ್ಚಿದ್ದರು.</p>.<p>ಈ ಬಗ್ಗೆ ಪ್ರಜಾವಾಣಿ ವೆಬ್ಸೈಟ್ನಲ್ಲಿ ಪ್ರಕಟವಾಗಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಶಿಕ್ಷಕ ದಂಪತಿಗೆ ದೂರವಾಣಿ ಕರೆ ಮಾಡಿ, ‘ಇಲಾಖೆ ಕಾರ್ಯ ತುಂಬಾ ಬೇಸರ ತಂದಿದೆ. ರಸ್ತೆಯ ಗುಂಡಿ ಮುಚ್ಚಿ ಒಳ್ಳೆಯ ಕೆಲಸ ಮಾಡಿದ್ದೀರಿ. ನಿಮಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.</p>.<p>ದಂಪತಿಗೆ ಅಭಿನಂದನೆ ಸಲ್ಲಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಡಿಡಿಪಿಐ ರೇವಣ್ಣಸಿದ್ದಪ್ಪ ಶಿಕ್ಷಕ ದಂಪತಿಯನ್ನು ಸನ್ಮಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಧುಗಿರಿ:</strong> ರಸ್ತೆಯ ಗುಂಡಿ ಮುಚ್ಚಿದ ಶಿಕ್ಷಕ ದಂಪತಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ದೂರವಾಣಿ ಮೂಲಕ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.</p>.<p><strong>ಇದನ್ನೂ ಓದಿ: <a href="https://www.prajavani.net/district/tumakuru/teacher-pothole-repair-madhugiri-682774.html" target="_blank">ರಸ್ತೆ ಮಧ್ಯದ ದೊಡ್ಡ ಗುಂಡಿಯನ್ನು ಮುಚ್ಚಿದ ಶಿಕ್ಷಕ ದಂಪತಿ</a></strong></p>.<p>ತಾಲ್ಲೂಕು ಪುರವರ ಗ್ರಾಮದ ಲೋಕೋಪಯೋಗಿ ಇಲಾಖೆಗೆ ಸೇರಿದ ರಸ್ತೆಯಲ್ಲಿ ಗುಂಡಿಯಲ್ಲಿ ವಾಹನ ಸವಾರರು ಬಿದ್ದು ನೋವು ಸಂಭವಿಸಿದ್ದವು. ಈ ವಿಷಯ ತಿಳಿದ ಶಿಕ್ಷಕ ಫಣೀಂದ್ರನಾಥ, ಪತ್ನಿ ಪಿ.ಜಿ.ಇಂದ್ರಮ್ಮ, ಸಿರಿ ಮತ್ತು ಕಲ್ಯಾಣ್ ಶನಿವಾರ ಶಾಲೆ ಮುಗಿಸಿಕೊಂಡು ಜಲ್ಲಿ ಮತ್ತು ಮಣ್ಣಿನಿಂದ ಗುಂಡಿಯನ್ನು ಮುಚ್ಚಿದ್ದರು.</p>.<p>ಈ ಬಗ್ಗೆ ಪ್ರಜಾವಾಣಿ ವೆಬ್ಸೈಟ್ನಲ್ಲಿ ಪ್ರಕಟವಾಗಿರುವುದನ್ನು ಗಮನಿಸಿದ ಸುರೇಶ್ ಕುಮಾರ್, ಶಿಕ್ಷಕ ದಂಪತಿಗೆ ದೂರವಾಣಿ ಕರೆ ಮಾಡಿ, ‘ಇಲಾಖೆ ಕಾರ್ಯ ತುಂಬಾ ಬೇಸರ ತಂದಿದೆ. ರಸ್ತೆಯ ಗುಂಡಿ ಮುಚ್ಚಿ ಒಳ್ಳೆಯ ಕೆಲಸ ಮಾಡಿದ್ದೀರಿ. ನಿಮಗೆ ಅಭಿನಂದನೆಗಳು’ ಎಂದು ಹೇಳಿದ್ದಾರೆ.</p>.<p>ದಂಪತಿಗೆ ಅಭಿನಂದನೆ ಸಲ್ಲಿರುವ ಆಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಸೋಮವಾರ ಡಿಡಿಪಿಐ ರೇವಣ್ಣಸಿದ್ದಪ್ಪ ಶಿಕ್ಷಕ ದಂಪತಿಯನ್ನು ಸನ್ಮಾನಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>