ಬಾಲಕಿ ಮನೆಗೆ ಭೇಟಿ ನೀಡಿದ ಸಚಿವರು ಸಾಂತ್ವನ ಹೇಳಿದರು. ಮುಂದಿನ ಆಗಸ್ಟ್ನಲ್ಲಿ ಪೂರಕ ಪರೀಕ್ಷೆ ನಡೆಯಲಿದ್ದು, ಆಗ ಅವಕಾಶ ಮಾಡಿಕೊಡಲಾಗುವುದು. ನಿಮ್ಮಂತೆಯೇ ಕೋವಿಡ್ ಸಮಯದಲ್ಲಿ ಸಾಕಷ್ಟು ಮಕ್ಕಳಿಗೆ ಸಮಸ್ಯೆ ಆಗಿರುತ್ತದೆ. ಪೂರಕ ಪರೀಕ್ಷೆ ಬರೆದವರನ್ನೂ ಮೊದಲ ಬಾರಿಗೆ ಪರೀಕ್ಷೆ ಬರೆದವರು ಎಂದೇ ಪರಿಗಣಿಸಲಾಗುವುದು. ಶುಲ್ಕದ ಬಗ್ಗೆ ಹೆಚ್ಚು ಆತಂಕಪಡುವ ಅಗತ್ಯವಿಲ್ಲ ಎಂದು ಸಮಾಧಾನಪಡಿಸಿದರು.