<p><strong>ಹುಳಿಯಾರು:</strong> ‘ಕಲ್ಪನೆಯನ್ನು ಕೊಲ್ಲುವ ಶಿಕ್ಷಣ ನಮ್ಮ ಮುಂದಿರುವುದು ವಿಷಾದಕರ’ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.</p>.<p>ಹುಳಿಯಾರು- ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ ಬಿಳಿಗೆರೆ ಕೃಷ್ಣಮೂರ್ತಿ ಅವರ ‘ಛೂಮಂತ್ರಯ್ಯನ ಕಥೆಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಆಧುನಿಕತೆಯ ಭರಾಟೆಗೆ ಉತ್ತರಿಸುವ ಭರದಲ್ಲಿ ಮಕ್ಕಳಿಗೆ ಕರಾರುವಕ್ಕುತನವನ್ನು ಕಲಿಸುತ್ತಿದ್ದೇವೆ. ಆದರೆ ಬದುಕು ಕರಾರುವಕ್ಕುತನದಿಂದ ಕೂಡಿರುವುದಿಲ್ಲ. ಕಲ್ಪನೆಯ ಲೋಕವನ್ನು ತೊಡೆದು ಹಾಕುವುದರ ಮೂಲಕ ಮಕ್ಕಳ ಬದುಕನ್ನು ನರಕವಾಗಿಸಿದ್ದೇವೆ ಎಂದರು.</p>.<p>ಕೃತಿಯಲ್ಲಿ ಬರುವ ಛೂಮಂತ್ರಯ್ಯ ಎಂಬುವನು ತೇಜಸ್ವಿಯವರ ಮಂದಣ್ಣ ಹಾಗೂ ಕರ್ವಾಲೋ ಎರಡೂ ವ್ಯಕ್ತಿತ್ವದ ಅನುಭವ ಲೋಕದ ಮಿಶ್ರಣದಂತಿದೆ. ನಗರಕ್ಕಿಂತ ಭಿನ್ನವಾದ ಮತ್ತು ಸುಂದರವಾದ ಲೋಕವೊಂದು ಇದೆ ಎನ್ನುವುದನ್ನು ಕೃತಿ ಬಿಚ್ಚಿಡುತ್ತದೆ. ಸಂತೋಷದ ಮೂಲವನ್ನು ಈ ಕೃತಿ ಕಟ್ಟಿಕೊಡುತ್ತದೆ ಎಂದು ಹೇಳಿದರು.</p>.<p>ಕೃತಿಕಾರ ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡಿ, ಹದಿಹರಯದ ಮಕ್ಕಳಿಗೆ ಸಾಹಿತ್ಯವೇ ಇಲ್ಲ. ಆ ಕೊರತೆಯನ್ನು ತುಂಬಿಸಲು ಈ ಕೃತಿಯ ಮೂಲಕ ಪ್ರಯತ್ನಿಸಿದ್ದೇನೆ ಎಂದರು.</p>.<p>ಸಹಜ ಕೃಷಿಕ ಶಿವನಂಜಯ್ಯ ಬಾಳಿಕಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ‘ಅನ್ವೇಷಣೆ’ ಪತ್ರಿಕೆ ಸಂಪಾದಕ ಆರ್.ಜಿ.ಹಳ್ಳಿ ನಾಗರಾಜ್, ವಿಮರ್ಶಕ ಬೆಳಗುಲಿ ಶಶಿಭೂಷಣ್, ಬಹುರೂಪಿ ಪ್ರಕಾಶನದ ಜಿ.ಎನ್. ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹುಳಿಯಾರು:</strong> ‘ಕಲ್ಪನೆಯನ್ನು ಕೊಲ್ಲುವ ಶಿಕ್ಷಣ ನಮ್ಮ ಮುಂದಿರುವುದು ವಿಷಾದಕರ’ ಎಂದು ಸಾಹಿತಿ ಜೋಗಿ ಅಭಿಪ್ರಾಯಪಟ್ಟರು.</p>.<p>ಹುಳಿಯಾರು- ಕೆಂಕೆರೆ ಬಿಎಂಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಬಹುರೂಪಿ ಪ್ರಕಾಶನ ಹಮ್ಮಿಕೊಂಡಿದ್ದ ಬಿಳಿಗೆರೆ ಕೃಷ್ಣಮೂರ್ತಿ ಅವರ ‘ಛೂಮಂತ್ರಯ್ಯನ ಕಥೆಗಳು’ ಕೃತಿ ಬಿಡುಗಡೆಗೊಳಿಸಿ ಮಾತನಾಡಿದರು.</p>.<p>ಆಧುನಿಕತೆಯ ಭರಾಟೆಗೆ ಉತ್ತರಿಸುವ ಭರದಲ್ಲಿ ಮಕ್ಕಳಿಗೆ ಕರಾರುವಕ್ಕುತನವನ್ನು ಕಲಿಸುತ್ತಿದ್ದೇವೆ. ಆದರೆ ಬದುಕು ಕರಾರುವಕ್ಕುತನದಿಂದ ಕೂಡಿರುವುದಿಲ್ಲ. ಕಲ್ಪನೆಯ ಲೋಕವನ್ನು ತೊಡೆದು ಹಾಕುವುದರ ಮೂಲಕ ಮಕ್ಕಳ ಬದುಕನ್ನು ನರಕವಾಗಿಸಿದ್ದೇವೆ ಎಂದರು.</p>.<p>ಕೃತಿಯಲ್ಲಿ ಬರುವ ಛೂಮಂತ್ರಯ್ಯ ಎಂಬುವನು ತೇಜಸ್ವಿಯವರ ಮಂದಣ್ಣ ಹಾಗೂ ಕರ್ವಾಲೋ ಎರಡೂ ವ್ಯಕ್ತಿತ್ವದ ಅನುಭವ ಲೋಕದ ಮಿಶ್ರಣದಂತಿದೆ. ನಗರಕ್ಕಿಂತ ಭಿನ್ನವಾದ ಮತ್ತು ಸುಂದರವಾದ ಲೋಕವೊಂದು ಇದೆ ಎನ್ನುವುದನ್ನು ಕೃತಿ ಬಿಚ್ಚಿಡುತ್ತದೆ. ಸಂತೋಷದ ಮೂಲವನ್ನು ಈ ಕೃತಿ ಕಟ್ಟಿಕೊಡುತ್ತದೆ ಎಂದು ಹೇಳಿದರು.</p>.<p>ಕೃತಿಕಾರ ಬಿಳಿಗೆರೆ ಕೃಷ್ಣಮೂರ್ತಿ ಮಾತನಾಡಿ, ಹದಿಹರಯದ ಮಕ್ಕಳಿಗೆ ಸಾಹಿತ್ಯವೇ ಇಲ್ಲ. ಆ ಕೊರತೆಯನ್ನು ತುಂಬಿಸಲು ಈ ಕೃತಿಯ ಮೂಲಕ ಪ್ರಯತ್ನಿಸಿದ್ದೇನೆ ಎಂದರು.</p>.<p>ಸಹಜ ಕೃಷಿಕ ಶಿವನಂಜಯ್ಯ ಬಾಳಿಕಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ‘ಅನ್ವೇಷಣೆ’ ಪತ್ರಿಕೆ ಸಂಪಾದಕ ಆರ್.ಜಿ.ಹಳ್ಳಿ ನಾಗರಾಜ್, ವಿಮರ್ಶಕ ಬೆಳಗುಲಿ ಶಶಿಭೂಷಣ್, ಬಹುರೂಪಿ ಪ್ರಕಾಶನದ ಜಿ.ಎನ್. ಮೋಹನ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>