<p>ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಗಂಗಾ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಸಿ.ಹರ್ಷಿತ್ 624 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p><strong>ವಿಷಯವಾರು:</strong> ಕನ್ನಡದಲ್ಲಿ 125, ಇಂಗ್ಲಿಷ್ 100, ಹಿಂದಿ 100, ಗಣಿತ 100, ವಿಜ್ಞಾನ 99 ಹಾಗೂ ಸಮಾಜ ವಿಜ್ಞಾನದಲ್ಲಿ 100 ಅಂಕಗಳಿಸಿದ್ದಾರೆ.</p>.<p>‘ಜಿಲ್ಲೆಗೆ ಮೊದಲ ಸ್ಥಾನ ಪಡೆದಿರುವುದು ಖುಷಿ ಆಗಿದೆ. ಡಾಕ್ಟರ್ ಆಗುವ ಗುರಿ ಹೊಂದಿದ್ದೇನೆ’ ಎಂದು ಸಿ.ಹರ್ಷಿತ್ ‘ಪ್ರಜಾವಾಣಿ’ ಜೊತೆ ಸಂತೋಷ ಹಂಚಿಕೊಂಡರು. ಚನ್ನಕೃಷ್ಣ ಉದಯ ವಾಹಿನಿಯಲ್ಲಿ ಪ್ರಸಾರವಾಗುವ ಕೈ ಅಡುಗೆ ಕಾರ್ಯಕ್ರಮದಲ್ಲಿ ಚಿತ್ರಕತೆ ಬರಹಗಾರರಾಗಿ ಕೆಲಸ ಮಾಡುತ್ತಿದ್ದಾರೆ.</p>.<p>ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಮನೆಪಾಠಕ್ಕೆ ಹೋಗುತ್ತಿದೆ. ಪ್ರತಿಯೊಬ್ಬರೂ ಟ್ಯೂಷನ್ಗೆ ಹೋಗಲೇಬೇಕು ಎನ್ನುವಂತಿಲ್ಲ. ಪಠ್ಯ ಪುಸ್ತಕವನ್ನು ಪೂರ್ಣ ಓದಿರಬೇಕು. ಸತತ ಪ್ರಯತ್ನವಿರಬೇಕು ಎಂದರು.</p>.<p>ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು. ಸ್ವತಂತ್ರವಾಗಿ ಬಿಡಬೇಕು. ಸಲಹೆ ಸೂಚನೆ ನೀಡುವುದು ಉತ್ತಮ. ಅಂಕಗಳಿಸಲು ಮೊದಲು ಉತ್ತಮ ಬರವಣಿಗೆ ಮುಖ್ಯವಾಗುತ್ತದೆ. ಶಾಲೆಯ ಹಂತದಲ್ಲಿ ನಡೆಯುವ ಕಿರು ಪರೀಕ್ಷೆಗಳನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.</p>.<p>ತಂದೆ ಚನ್ನಕೃಷ್ಣ ಮಾತನಾಡಿ, ತುಂಬಾ ಸಂತೋಷವಾಗುತ್ತಿದೆ. ಮುಂದೆ ಅವನ ಗುರಿ ಏನಿದೆ ಅದಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರಿನ ಸಿದ್ಧಗಂಗಾ ಮಠದ ಸಿದ್ಧಗಂಗಾ ಇಂಗ್ಲಿಷ್ ಮಾಧ್ಯಮ ಪ್ರೌಢಶಾಲೆ ವಿದ್ಯಾರ್ಥಿ ಸಿ.ಹರ್ಷಿತ್ 624 ಅಂಕಗಳಿಸಿ ರಾಜ್ಯಕ್ಕೆ ದ್ವಿತೀಯ, ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದ್ದಾರೆ.</p>.<p><strong>ವಿಷಯವಾರು:</strong> ಕನ್ನಡದಲ್ಲಿ 125, ಇಂಗ್ಲಿಷ್ 100, ಹಿಂದಿ 100, ಗಣಿತ 100, ವಿಜ್ಞಾನ 99 ಹಾಗೂ ಸಮಾಜ ವಿಜ್ಞಾನದಲ್ಲಿ 100 ಅಂಕಗಳಿಸಿದ್ದಾರೆ.</p>.<p>‘ಜಿಲ್ಲೆಗೆ ಮೊದಲ ಸ್ಥಾನ ಪಡೆದಿರುವುದು ಖುಷಿ ಆಗಿದೆ. ಡಾಕ್ಟರ್ ಆಗುವ ಗುರಿ ಹೊಂದಿದ್ದೇನೆ’ ಎಂದು ಸಿ.ಹರ್ಷಿತ್ ‘ಪ್ರಜಾವಾಣಿ’ ಜೊತೆ ಸಂತೋಷ ಹಂಚಿಕೊಂಡರು. ಚನ್ನಕೃಷ್ಣ ಉದಯ ವಾಹಿನಿಯಲ್ಲಿ ಪ್ರಸಾರವಾಗುವ ಕೈ ಅಡುಗೆ ಕಾರ್ಯಕ್ರಮದಲ್ಲಿ ಚಿತ್ರಕತೆ ಬರಹಗಾರರಾಗಿ ಕೆಲಸ ಮಾಡುತ್ತಿದ್ದಾರೆ.</p>.<p>ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಮನೆಪಾಠಕ್ಕೆ ಹೋಗುತ್ತಿದೆ. ಪ್ರತಿಯೊಬ್ಬರೂ ಟ್ಯೂಷನ್ಗೆ ಹೋಗಲೇಬೇಕು ಎನ್ನುವಂತಿಲ್ಲ. ಪಠ್ಯ ಪುಸ್ತಕವನ್ನು ಪೂರ್ಣ ಓದಿರಬೇಕು. ಸತತ ಪ್ರಯತ್ನವಿರಬೇಕು ಎಂದರು.</p>.<p>ಪೋಷಕರು ಮಕ್ಕಳ ಮೇಲೆ ಒತ್ತಡ ಹಾಕಬಾರದು. ಸ್ವತಂತ್ರವಾಗಿ ಬಿಡಬೇಕು. ಸಲಹೆ ಸೂಚನೆ ನೀಡುವುದು ಉತ್ತಮ. ಅಂಕಗಳಿಸಲು ಮೊದಲು ಉತ್ತಮ ಬರವಣಿಗೆ ಮುಖ್ಯವಾಗುತ್ತದೆ. ಶಾಲೆಯ ಹಂತದಲ್ಲಿ ನಡೆಯುವ ಕಿರು ಪರೀಕ್ಷೆಗಳನ್ನು ನಿರ್ಲಕ್ಷಿಸಬಾರದು ಎಂದು ಸಲಹೆ ನೀಡಿದರು.</p>.<p>ತಂದೆ ಚನ್ನಕೃಷ್ಣ ಮಾತನಾಡಿ, ತುಂಬಾ ಸಂತೋಷವಾಗುತ್ತಿದೆ. ಮುಂದೆ ಅವನ ಗುರಿ ಏನಿದೆ ಅದಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡುತ್ತೇನೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>