<p><strong>ತುಮಕೂರು:</strong> ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಅಮೃತ ಮಹೋತ್ಸವ ಕಾರ್ಯಕ್ರಮಗಳ ಆಯೋಜನೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ತುಂಬಿದ್ದು, 75 ವಾರಗಳ ಕಾಲ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು’ ಎಂದು ನಿರ್ದೇಶಿಸಿದರು.</p>.<p>‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಆಯ್ಕೆಯಾಗಿರುವ ತೆಂಗು ಬೆಳೆಯ ಉತ್ಪನ್ನಗಳ ಕುರಿತು ಕಾರ್ಯಾಗಾರ ಆಯೋಜಿಸಬೇಕು. ತೆಂಗುಪಾರ್ಕ್ ನಿರ್ಮಾಣಕ್ಕೆ ತುಮಕೂರು– ಶಿವಮೊಗ್ಗ ಹೆದ್ದಾರಿಯಲ್ಲಿ ಜಾಗ ಗುರುತಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ರಘು ಅವರಿಗೆ ತಿಳಿಸಿದರು.</p>.<p>ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಸೌಲಭ್ಯಗಳ ಕುರಿತು ಹಮ್ಮಿಕೊಳ್ಳುವ ಕಾರ್ಯಕ್ರಮ, ಆಚರಣೆಗಳ ಬ್ಯಾನರ್ನಲ್ಲಿ ಅಮೃತ ಮಹೋತ್ಸವ ಎಂಬುದನ್ನು ಪ್ರಚುರಪಡಿಸಬೇಕು. ಕೃಷಿ ಇಲಾಖೆಯಿಂದ ಎಣ್ಣೆಕಾಳು ಬೆಳೆ, ತೋಟಗಾರಿಕೆ ಇಲಾಖೆಯಿಂದ ತೆಂಗು ಉತ್ಪನ್ನಗಳ ಬಗ್ಗೆ ಅಮೃತಮಹೋತ್ಸವದ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.</p>.<p>ಎಲ್ಲಾ ತಾಲೂಕುಗಳಲ್ಲೂ ಪ್ರತಿ ತಿಂಗಳು ಆರೋಗ್ಯ ಶಿಬಿರ, ಶಾಲೆಗಳಲ್ಲಿ ಗಿಡ ನೆಡುವುದು, ಮೀನು ಉದ್ಯಮದ ಬಗ್ಗೆ ಕಾರ್ಯಾಗಾರ, ಆಹಾರ ಧಾನ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು.</p>.<p>ಅಕ್ರಮ ನಡೆಸದೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಮುದಾಯದ ಕಾಮಗಾರಿಗಳಿಗೆ ಆದ್ಯತೆ ಕೊಡಬೇಕು. ಎಣ್ಣೆಕಾಳು ಬೆಳೆ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಿ ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದರು.</p>.<p>ಅಮೃತ ಮಹೋತ್ಸವ ಕಾರ್ಯಕ್ರಮಗಳ ಆಯೋಜನೆ ಕುರಿತು ನಡೆದ ಪರಿಶೀಲನಾ ಸಭೆಯಲ್ಲಿ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷಗಳು ತುಂಬಿದ್ದು, 75 ವಾರಗಳ ಕಾಲ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಬೇಕು’ ಎಂದು ನಿರ್ದೇಶಿಸಿದರು.</p>.<p>‘ಒಂದು ಜಿಲ್ಲೆ ಒಂದು ಉತ್ಪನ್ನ’ ಯೋಜನೆಯಡಿ ಆಯ್ಕೆಯಾಗಿರುವ ತೆಂಗು ಬೆಳೆಯ ಉತ್ಪನ್ನಗಳ ಕುರಿತು ಕಾರ್ಯಾಗಾರ ಆಯೋಜಿಸಬೇಕು. ತೆಂಗುಪಾರ್ಕ್ ನಿರ್ಮಾಣಕ್ಕೆ ತುಮಕೂರು– ಶಿವಮೊಗ್ಗ ಹೆದ್ದಾರಿಯಲ್ಲಿ ಜಾಗ ಗುರುತಿಸುವಂತೆ ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಬಿ.ರಘು ಅವರಿಗೆ ತಿಳಿಸಿದರು.</p>.<p>ಎಲ್ಲಾ ಇಲಾಖೆಗಳು ತಮ್ಮ ವ್ಯಾಪ್ತಿಯ ಸೌಲಭ್ಯಗಳ ಕುರಿತು ಹಮ್ಮಿಕೊಳ್ಳುವ ಕಾರ್ಯಕ್ರಮ, ಆಚರಣೆಗಳ ಬ್ಯಾನರ್ನಲ್ಲಿ ಅಮೃತ ಮಹೋತ್ಸವ ಎಂಬುದನ್ನು ಪ್ರಚುರಪಡಿಸಬೇಕು. ಕೃಷಿ ಇಲಾಖೆಯಿಂದ ಎಣ್ಣೆಕಾಳು ಬೆಳೆ, ತೋಟಗಾರಿಕೆ ಇಲಾಖೆಯಿಂದ ತೆಂಗು ಉತ್ಪನ್ನಗಳ ಬಗ್ಗೆ ಅಮೃತಮಹೋತ್ಸವದ ಅಡಿಯಲ್ಲಿ ಕಾರ್ಯಕ್ರಮ ಆಯೋಜಿಸಬೇಕು ಎಂದರು.</p>.<p>ಎಲ್ಲಾ ತಾಲೂಕುಗಳಲ್ಲೂ ಪ್ರತಿ ತಿಂಗಳು ಆರೋಗ್ಯ ಶಿಬಿರ, ಶಾಲೆಗಳಲ್ಲಿ ಗಿಡ ನೆಡುವುದು, ಮೀನು ಉದ್ಯಮದ ಬಗ್ಗೆ ಕಾರ್ಯಾಗಾರ, ಆಹಾರ ಧಾನ್ಯಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸೂಚಿಸಿದರು.</p>.<p>ಅಕ್ರಮ ನಡೆಸದೆ ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು. ಸಮುದಾಯದ ಕಾಮಗಾರಿಗಳಿಗೆ ಆದ್ಯತೆ ಕೊಡಬೇಕು. ಎಣ್ಣೆಕಾಳು ಬೆಳೆ ಬೆಳೆಯುವವರ ಸಂಖ್ಯೆ ಕಡಿಮೆಯಾಗುತ್ತಿದ್ದು, ಈ ಬೆಳೆಗಳನ್ನು ಬೆಳೆಯುವಂತೆ ರೈತರಿಗೆ ಅರಿವು ಮೂಡಿಸಿ ಪ್ರೋತ್ಸಾಹಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>