<p><strong>ತುಮಕೂರು:</strong> ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮೆರವಣಿಗೆ ನಡೆಯಿತು. ಬೆಳಿಗ್ಗೆಯಿಂದಲೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು.</p>.<p>ಮೊಹಮ್ಮದ್ ಪೈಗಂಬರ್ ಹುಟ್ಟಿದ ದಿನವನ್ನು ಈದ್ ಮಿಲಾದ್ ಎಂದು ಆಚರಿಸಲಾಗುತ್ತದೆ. ಪೈಗಂಬರ್ ಹೆಸರಿನಲ್ಲಿ ಮಸೀದಿಗಳಲ್ಲಿ ಅನ್ನ ಸಂತರ್ಪಣೆ ಮಾಡಲಾಯಿತು. ಮಸೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು. ಮುಸ್ಲಿಮರು ಬೆಳಿಗ್ಗೆಯೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<p>ನಗರದ ಗೂಡ್ಶೆಡ್ ಕಾಲೊನಿಯ ಮೀನಾ ಮಸೀದಿ ಬಳಿ ಚಾಂದಿನಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮಕ್ಕಳು, ವೃದ್ಧರು ಒಳಗೊಂಡಂತೆ ಎಲ್ಲ ವಯೋಮಾನದವರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.</p>.<p>ಬನಶಂಕರಿ, ಸದಾಶಿವನಗರ, ನಜರಾಬಾದ್, ಚಾಂದಿನಿ ವೃತ್ತ, ಪಿ.ಎಚ್.ಕಾಲೊನಿ, ಬಿ.ಜಿ.ಪಾಳ್ಯ ವೃತ್ತದಿಂದ ಸಂತೆಪೇಟೆ ವರೆಗೆ ಸಾಗಿತು. ಮಂಡಿಪೇಟೆ ಮುಖ್ಯ ರಸ್ತೆಯಲ್ಲಿ ಸಾಗಿ ಗುಂಚಿ ವೃತ್ತ, ಬಾರ್ಲೈನ್ ಮಸೀದಿ, ಬಿ.ಎಚ್.ರಸ್ತೆ ಮೂಲಕ ಕುಣಿಗಲ್ ರಸ್ತೆಯ ಈದ್ಗಾ ಮೈದಾನದ ಬಳಿ ಮುಕ್ತಾಯವಾಯಿತು.</p>.<p>ಟೌನ್ಹಾಲ್ ವೃತ್ತ, ಕಾಲ್ಟೆಕ್ಸ್, ಕುಣಿಗಲ್ ರಸ್ತೆ, ಬಾರ್ಲೈನ್ ರಸ್ತೆ, ಗುಬ್ಬಿ ಗೇಟ್, ಬಿ.ಜಿ.ಪಾಳ್ಯ ವೃತ್ತದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಶುಕ್ರವಾರ ಮೆರವಣಿಗೆ ನಡೆಯಿತು. ಬೆಳಿಗ್ಗೆಯಿಂದಲೇ ಮಸೀದಿಗಳಲ್ಲಿ ವಿಶೇಷ ಪ್ರಾರ್ಥನೆ ನೆರವೇರಿತು.</p>.<p>ಮೊಹಮ್ಮದ್ ಪೈಗಂಬರ್ ಹುಟ್ಟಿದ ದಿನವನ್ನು ಈದ್ ಮಿಲಾದ್ ಎಂದು ಆಚರಿಸಲಾಗುತ್ತದೆ. ಪೈಗಂಬರ್ ಹೆಸರಿನಲ್ಲಿ ಮಸೀದಿಗಳಲ್ಲಿ ಅನ್ನ ಸಂತರ್ಪಣೆ ಮಾಡಲಾಯಿತು. ಮಸೀದಿಗಳು ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಿದವು. ಮುಸ್ಲಿಮರು ಬೆಳಿಗ್ಗೆಯೇ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.</p>.<p>ನಗರದ ಗೂಡ್ಶೆಡ್ ಕಾಲೊನಿಯ ಮೀನಾ ಮಸೀದಿ ಬಳಿ ಚಾಂದಿನಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮಕ್ಕಳು, ವೃದ್ಧರು ಒಳಗೊಂಡಂತೆ ಎಲ್ಲ ವಯೋಮಾನದವರು ಮೆರವಣಿಗೆಯಲ್ಲಿ ಹೆಜ್ಜೆ ಹಾಕಿದರು.</p>.<p>ಬನಶಂಕರಿ, ಸದಾಶಿವನಗರ, ನಜರಾಬಾದ್, ಚಾಂದಿನಿ ವೃತ್ತ, ಪಿ.ಎಚ್.ಕಾಲೊನಿ, ಬಿ.ಜಿ.ಪಾಳ್ಯ ವೃತ್ತದಿಂದ ಸಂತೆಪೇಟೆ ವರೆಗೆ ಸಾಗಿತು. ಮಂಡಿಪೇಟೆ ಮುಖ್ಯ ರಸ್ತೆಯಲ್ಲಿ ಸಾಗಿ ಗುಂಚಿ ವೃತ್ತ, ಬಾರ್ಲೈನ್ ಮಸೀದಿ, ಬಿ.ಎಚ್.ರಸ್ತೆ ಮೂಲಕ ಕುಣಿಗಲ್ ರಸ್ತೆಯ ಈದ್ಗಾ ಮೈದಾನದ ಬಳಿ ಮುಕ್ತಾಯವಾಯಿತು.</p>.<p>ಟೌನ್ಹಾಲ್ ವೃತ್ತ, ಕಾಲ್ಟೆಕ್ಸ್, ಕುಣಿಗಲ್ ರಸ್ತೆ, ಬಾರ್ಲೈನ್ ರಸ್ತೆ, ಗುಬ್ಬಿ ಗೇಟ್, ಬಿ.ಜಿ.ಪಾಳ್ಯ ವೃತ್ತದ ಬಳಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>