<p><strong>ಶಿರಾ:</strong> ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯ ದೊಡ್ಡಬಾಣಗೆರೆಯಲ್ಲಿ ಪುಟ್ಟೀರಮ್ಮ (86) ಅವರನ್ನು ಕೊಲೆ ಮಾಡಿ 53 ಗ್ರಾಂ ಚಿನ್ನದ ಸರ ಅಪಹರಿಸಿದ್ದ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪುಟ್ಟೀರಮ್ಮ ಮನೆಯಲ್ಲಿ ಒಂಟಿಯಾಗಿದ್ದಾಗ ಹಿಂದಿನಿಂದ ಬಂದ ಅದೇ ಗ್ರಾಮದ ಶ್ರೀಧರ್ ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿ ಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ.</p>.<p>ಪುಟ್ಟೀರಮ್ಮ ಪುತ್ರ ವೀರಣ್ಣ ನೀಡಿದ ದೂರು ಆಧರಿಸಿ ಪೊಲೀಸರು ಶಿರಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸುಲಿಗೆ ಮಾಡಿದ್ದ ಸರವನ್ನು ಬೆಂಗಳೂರು ಬಾಗಲುಗುಂಟೆಯ ಖಾಸಗಿ ಬ್ಯಾಂಕ್ನಲ್ಲಿ ₹2 ಲಕ್ಷಕ್ಕೆ ಗಿರವಿ ಇಟ್ಟು, ಆ ಹಣದಿಂದ ಮೊಬೈಲ್, ಬಟ್ಟೆ ಇತ್ಯಾದಿಗಾಗಿ ದುಂದು ವೆಚ್ಚ ಮಾಡಿದ್ದಾಗಿ ಒಪ್ಪಿಕೊಂಡಿದ್ದ.</p>.<p>ಒತ್ತೆ ಇಟ್ಟಿದ್ದ ₹6 ಲಕ್ಷ ಮೌಲ್ಯದ ಸರ ಮತ್ತು ಎರಡು ಮೊಬೈಲ್ಗಳನ್ನು ವಶ ಪಡಿಸಿಕೊಂಡಿದ್ದಾರೆ.</p>.<p>ಆರೋಪಿ ಶ್ರೀಧರ್ ಮದ್ಯಪಾನ, ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.</p>.<p>ಬೆಂಗಳೂರಿನ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ, ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶಿರಾ:</strong> ತಾಲ್ಲೂಕಿನ ಪಟ್ಟನಾಯಕನಹಳ್ಳಿ ಪೊಲೀಸ್ ಠಾಣೆಯ ದೊಡ್ಡಬಾಣಗೆರೆಯಲ್ಲಿ ಪುಟ್ಟೀರಮ್ಮ (86) ಅವರನ್ನು ಕೊಲೆ ಮಾಡಿ 53 ಗ್ರಾಂ ಚಿನ್ನದ ಸರ ಅಪಹರಿಸಿದ್ದ ಶ್ರೀಧರ್ನನ್ನು ಪೊಲೀಸರು ಬಂಧಿಸಿದ್ದಾರೆ.</p>.<p>ಪುಟ್ಟೀರಮ್ಮ ಮನೆಯಲ್ಲಿ ಒಂಟಿಯಾಗಿದ್ದಾಗ ಹಿಂದಿನಿಂದ ಬಂದ ಅದೇ ಗ್ರಾಮದ ಶ್ರೀಧರ್ ಬಟ್ಟೆಯ ಹಗ್ಗದಿಂದ ಕುತ್ತಿಗೆಗೆ ಬಿಗಿದು ಕೆಳಗೆ ಬೀಳಿಸಿ ಮುಖಕ್ಕೆ ಟವೆಲ್ ಒತ್ತಿ ಹಿಡಿದು ಕೊಲೆ ಮಾಡಿ ಆಕೆಯ ಕೊರಳಿನಲ್ಲಿದ್ದ 53 ಗ್ರಾಂ ಚಿನ್ನದ ಸರ ಕಸಿದು ಪರಾರಿಯಾಗಿದ್ದ.</p>.<p>ಪುಟ್ಟೀರಮ್ಮ ಪುತ್ರ ವೀರಣ್ಣ ನೀಡಿದ ದೂರು ಆಧರಿಸಿ ಪೊಲೀಸರು ಶಿರಾದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದ ಬಳಿ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದಾಗ ಸುಲಿಗೆ ಮಾಡಿದ್ದ ಸರವನ್ನು ಬೆಂಗಳೂರು ಬಾಗಲುಗುಂಟೆಯ ಖಾಸಗಿ ಬ್ಯಾಂಕ್ನಲ್ಲಿ ₹2 ಲಕ್ಷಕ್ಕೆ ಗಿರವಿ ಇಟ್ಟು, ಆ ಹಣದಿಂದ ಮೊಬೈಲ್, ಬಟ್ಟೆ ಇತ್ಯಾದಿಗಾಗಿ ದುಂದು ವೆಚ್ಚ ಮಾಡಿದ್ದಾಗಿ ಒಪ್ಪಿಕೊಂಡಿದ್ದ.</p>.<p>ಒತ್ತೆ ಇಟ್ಟಿದ್ದ ₹6 ಲಕ್ಷ ಮೌಲ್ಯದ ಸರ ಮತ್ತು ಎರಡು ಮೊಬೈಲ್ಗಳನ್ನು ವಶ ಪಡಿಸಿಕೊಂಡಿದ್ದಾರೆ.</p>.<p>ಆರೋಪಿ ಶ್ರೀಧರ್ ಮದ್ಯಪಾನ, ಜೂಜಾಟದಂತಹ ದುಶ್ಚಟಗಳಿಗೆ ಒಳಗಾಗಿದ್ದು, ಹಣದ ದುರಾಸೆಗಾಗಿ ಕೊಲೆ ಮಾಡಿರುವುದು ತನಿಖೆಯಿಂದ ತಿಳಿದು ಬಂದಿದೆ.</p>.<p>ಬೆಂಗಳೂರಿನ ಮಡಿವಾಳ ಮತ್ತು ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ, ಸುಲಿಗೆ ಹಾಗೂ ವಂಚನೆ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>