<p><strong>ಕುಣಿಗಲ್</strong>: ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಉಸಿರುಗಟ್ಟಿಸಿ ವೃದ್ಧೆಯನ್ನು ಕೊಲೆ ಮಾಡಿದ ಕಳ್ಳರು, ಚಿನ್ನದ ಸರ, ಬಳೆ, ಓಲೆ ಕಿತ್ತುಕೊಂಡು ಹೋಗಿದ್ದಾರೆ. </p><p>ನಾಗಮ್ಮ (70) ಕೊಲೆಯಾದವರು. ನಾಗಮ್ಮ ಮನೆಯಲ್ಲಿ ಒಬ್ಬರೇ ಇದ್ದರು. ಸೋಮವಾರ ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ವಿಷಯ ಗೊತ್ತಾಗಿದೆ. </p><p>ನಾಗಮ್ಮ ಮಗ ವರದರಾಜು ಮಾರ್ಚ್ 8 ರಂದು ಮನೆಗೆ ಹೋಗಿದ್ದರು. ಸೋಲಾರ್ ಮತ್ತು ಪೈಪ್ ಲೈನ್ ಕೆಲಸ ಮುಗಿಸಿ, ಅವತ್ತೇ ಬೆಂಗಳೂರಿಗೆ ತೆರಳಿದ್ದರು. </p><p>ಮಾರ್ಚ್ 9 ರಂದು ಮನೆಗೆ ನುಗ್ಗಿದ ಕಳ್ಳರು ನಾಗಮ್ಮ ಅವರನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದು, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ.</p><p> ನಾಗಮ್ಮ ಎರಡು ದಿನಗಳಿಂದ ಮನೆಯಿಂದ ಹೊರಗಡೆ ಬಂದಿರಲಿಲ್ಲ. ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಮನೆಯ ಬಳಿ ಹೋಗಿ ಕಿಟಕಿಯಿಂದ ನೋಡಿದಾಗ ಮೃತದೇಹ ಕಂಡು ಬಂದಿದೆ.</p><p>ಕೂಡಲೇ ಕುಟುಂಬಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್</strong>: ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಉಸಿರುಗಟ್ಟಿಸಿ ವೃದ್ಧೆಯನ್ನು ಕೊಲೆ ಮಾಡಿದ ಕಳ್ಳರು, ಚಿನ್ನದ ಸರ, ಬಳೆ, ಓಲೆ ಕಿತ್ತುಕೊಂಡು ಹೋಗಿದ್ದಾರೆ. </p><p>ನಾಗಮ್ಮ (70) ಕೊಲೆಯಾದವರು. ನಾಗಮ್ಮ ಮನೆಯಲ್ಲಿ ಒಬ್ಬರೇ ಇದ್ದರು. ಸೋಮವಾರ ಘಟನೆ ನಡೆದಿದ್ದು, ಮಂಗಳವಾರ ರಾತ್ರಿ ಅಕ್ಕಪಕ್ಕದ ಮನೆಯವರು ಹೋಗಿ ನೋಡಿದಾಗ ವಿಷಯ ಗೊತ್ತಾಗಿದೆ. </p><p>ನಾಗಮ್ಮ ಮಗ ವರದರಾಜು ಮಾರ್ಚ್ 8 ರಂದು ಮನೆಗೆ ಹೋಗಿದ್ದರು. ಸೋಲಾರ್ ಮತ್ತು ಪೈಪ್ ಲೈನ್ ಕೆಲಸ ಮುಗಿಸಿ, ಅವತ್ತೇ ಬೆಂಗಳೂರಿಗೆ ತೆರಳಿದ್ದರು. </p><p>ಮಾರ್ಚ್ 9 ರಂದು ಮನೆಗೆ ನುಗ್ಗಿದ ಕಳ್ಳರು ನಾಗಮ್ಮ ಅವರನ್ನು ಕೊಲೆ ಮಾಡಿ, ಚಿನ್ನಾಭರಣ ಕದ್ದು, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾರೆ.</p><p> ನಾಗಮ್ಮ ಎರಡು ದಿನಗಳಿಂದ ಮನೆಯಿಂದ ಹೊರಗಡೆ ಬಂದಿರಲಿಲ್ಲ. ಅಕ್ಕಪಕ್ಕದ ನಿವಾಸಿಗಳು ಇದನ್ನು ಗಮನಿಸಿ ಮನೆಯ ಬಳಿ ಹೋಗಿ ಕಿಟಕಿಯಿಂದ ನೋಡಿದಾಗ ಮೃತದೇಹ ಕಂಡು ಬಂದಿದೆ.</p><p>ಕೂಡಲೇ ಕುಟುಂಬಸ್ಥರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಹುಲಿಯೂರುದುರ್ಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>