<p>ಚೇಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ನೀಡಿ, ಅಧಿಕಾರದ ಗದ್ದುಗೆ ಏರಲು ತವಕಿಸುತ್ತಿದೆ. ಸುಳ್ಳನ್ನು ನಿಜವೆಂದು ನಂಬಿಸುವ ಮೋಡಿಗಾರ ನರೇಂದ್ರ ಮೋದಿ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದರು.</p>.<p>ಹೋಬಳಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ಉಳ್ಳವರ ಪರವಾಗಿದೆ. ರೈತರ ಬೆಳೆಗಳಿಗೆ, ಹಾಲು, ಮೊಸರು, ಕೃಷಿ ಯಂತ್ರೋಪಕರಣಗಳಲ್ಲಿ, ಬಿತ್ತನೆ ಬೀಜಗಳಲ್ಲಿ, ರಾಸಾಯನಿಕ ಗೊಬ್ಬರಗಳ ಮೇಲೆ ತೆರಿಗೆ ಹೆಚ್ಚಿಸಿದೆ ಎಂದು ಟೀಕಿಸಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಗ್ರಾಮೀಣ ಭಾಗದ ತಾಯಂದಿರ ಮೇಲೆ ಕೆಟ್ಟ ಆರೋಪ ಮಾಡಿರುವುದು ಖಂಡನೀಯ ಎಂದರು.</p>.<p>ಜಿಲ್ಲಾ ಕಾರ್ಯದರ್ಶಿ ಶಕರಾನಂದ್, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಕೆ.ಆರ್. ತಾತಯ್ಯ, ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೈಲಾರಯ್ಯ, ಗುರು ರೇಣುಕಾರಾಧ್ಯ, ರಮೇಶ್, ಶಶಿಕಿರಣ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ಸಣ್ಣರಂಗಯ್ಯ, ಯತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚೇಳೂರು: ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸುಳ್ಳು ಆಶ್ವಾಸನೆ ನೀಡಿ, ಅಧಿಕಾರದ ಗದ್ದುಗೆ ಏರಲು ತವಕಿಸುತ್ತಿದೆ. ಸುಳ್ಳನ್ನು ನಿಜವೆಂದು ನಂಬಿಸುವ ಮೋಡಿಗಾರ ನರೇಂದ್ರ ಮೋದಿ ಎಂದು ಶಾಸಕ ಎಸ್.ಆರ್. ಶ್ರೀನಿವಾಸ್ ವಾಗ್ದಾಳಿ ನಡೆಸಿದರು.</p>.<p>ಹೋಬಳಿ ವ್ಯಾಪ್ತಿಯಲ್ಲಿ ಮನೆ ಮನೆಗೆ ತೆರಳಿ ಪ್ರಚಾರ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.</p>.<p>ಬಿಜೆಪಿ ಸರ್ಕಾರ ಉಳ್ಳವರ ಪರವಾಗಿದೆ. ರೈತರ ಬೆಳೆಗಳಿಗೆ, ಹಾಲು, ಮೊಸರು, ಕೃಷಿ ಯಂತ್ರೋಪಕರಣಗಳಲ್ಲಿ, ಬಿತ್ತನೆ ಬೀಜಗಳಲ್ಲಿ, ರಾಸಾಯನಿಕ ಗೊಬ್ಬರಗಳ ಮೇಲೆ ತೆರಿಗೆ ಹೆಚ್ಚಿಸಿದೆ ಎಂದು ಟೀಕಿಸಿದರು.</p>.<p>ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆಗಳನ್ನು ನೀಡಿರುವುದನ್ನು ಸಹಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯದ ಗ್ರಾಮೀಣ ಭಾಗದ ತಾಯಂದಿರ ಮೇಲೆ ಕೆಟ್ಟ ಆರೋಪ ಮಾಡಿರುವುದು ಖಂಡನೀಯ ಎಂದರು.</p>.<p>ಜಿಲ್ಲಾ ಕಾರ್ಯದರ್ಶಿ ಶಕರಾನಂದ್, ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಕೆ.ಆರ್. ವೆಂಕಟೇಶ್, ಕೆ.ಆರ್. ತಾತಯ್ಯ, ಬಿದರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮೈಲಾರಯ್ಯ, ಗುರು ರೇಣುಕಾರಾಧ್ಯ, ರಮೇಶ್, ಶಶಿಕಿರಣ್, ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸೌಭಾಗ್ಯಮ್ಮ, ಸಣ್ಣರಂಗಯ್ಯ, ಯತೀಶ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>