ಮಾಜಿ ಸಚಿವ ಡಿ.ನಾಗರಾಜಯ್ಯ ಮಾತನಾಡಿ, ‘ರಾಜ್ಯದಲ್ಲಿ ಜೆಡಿಎಸ್ ಬಿಜೆಪಿ ಮೈತ್ರಿಯಾಗಿರುವಂತೆ ತಾಲ್ಲೂಕಿನಲ್ಲಿ ಸಹೋದರರು ಒಂದಾಗಿದ್ದೇವೆ. ಡಿ.ಕೆ.ಸುರೇಶ್ ಅವರಿಗೆ ಕುಣಿಗಲ್ ತಾಲ್ಲೂಕಿನವರ ಮತ ಬೇಕಾಗಿದೆ. ಆದರೆ ಅವರಿಗೆ ತಾಲ್ಲೂಕಿನ ಅಭಿವೃದ್ಧಿಗಿಂತಲೂ ಕನಕಪುರ, ರಾಮನಗರ ಅಭಿವೃದ್ಧಿ ಮುಖ್ಯವಾಗಿರುವುದರಿಂದ ಸಂಪರ್ಕ ಕಾಲುವೆ ನಿರ್ಮಿಸಿ ಹೇಮಾವತಿ ನೀರನ್ನು ರಾಮನಗರ, ಕನಕಪುರಕ್ಕೆ ತೆಗೆದುಕೊಂಡು ಹೋಗಲು ಸಂಚು ಹೂಡಿದ್ದಾರೆ. ಕುಣಿಗಲ್ ದೊಡ್ಡಕೆರೆ ನೀರನ್ನು ಕುಡಿಯುವ ನೀರಿಗೆ ಮೀಸಲಿಟ್ಟು, ನಡೆಮಾವಿನಪುರ, ಚೊಟ್ಟನಹಳ್ಳಿ, ಸೇರಿದಂತೆ ಇತರೆ ಗ್ರಾಮಗಳ ಅಚ್ಚುಕಟ್ಟು ಪ್ರದೇಶಗಳಿಗೆ ನೀರು ಹರಿಯದಂತೆ ಮಾಡಿದ್ದಾರೆ’ ಎಂದು ಟೀಕಿಸಿದರು.