<p>ತುಮಕೂರು: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಯಶಸ್ವಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚುನಾವಣಾ ನೀತಿ ಸಂಹಿತೆ<br />ಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಜಿಲ್ಲೆಯ ತಹಶೀಲ್ದಾರ್ಗಳಿಗೆ ಸೂಚಿಸಿದರು.</p>.<p>ಗ್ರಾಮ ಪಂಚಾಯಿತಿ ಚುನಾವಣಾ ಸಂಬಂಧ ಶುಕ್ರವಾರ ತಹಶೀಲ್ದಾರ್ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.</p>.<p>ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಬೇಕು. ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಬಗ್ಗೆತಹಶೀಲ್ದಾರ್, ಇನ್ಸ್ಪೆಕ್ಟರ್, ತಾಲ್ಲೂಕು ಪಂಚಾ<br />ಯಿತಿ ಕಾರ್ಯನಿರ್ವಾಹಣಾಧಿಕಾರಿ ತಂಡ ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ದೂರುಗಳಿಗಾಗಿ ದೂರು ಕೋಶ ಹಾಗೂ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.</p>.<p>ಮತಗಟ್ಟೆಗಳಿಗೆ ತಹಶೀಲ್ದಾರ್ಗಳು ಖುದ್ದು ಭೇಟಿ ನೀಡಬೇಕು. ಸೌಲಭ್ಯಗಳ ಬಗ್ಗೆ ಪರಿಶೀಲಿಸಬೇಕು. ನ್ಯೂನತೆಗಳಿದ್ದರೆ ಸರಿಪಡಿಸಿ ಮತಗಟ್ಟೆಗಳು ಸಮರ್ಪಕವಾಗಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು.</p>.<p>ಜಿ.ಪಂ ಸಿಇಒ ಶುಭಾ ಕಲ್ಯಾಣ್, ತಹಶೀಲ್ದಾರ್ ಮೋಹನ್ಕುಮಾರ್, ಚುನಾವಣಾ ಶಾಖೆಯ ನಾಗಭೂಷಣ್, ಎನ್ಐಸಿ ಅಧಿಕಾರಿ ಅಜಯ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ತುಮಕೂರು: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯಿತಿ ಚುನಾವಣೆಯನ್ನು ಯಶಸ್ವಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಚುನಾವಣಾ ನೀತಿ ಸಂಹಿತೆ<br />ಯನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಜಿಲ್ಲೆಯ ತಹಶೀಲ್ದಾರ್ಗಳಿಗೆ ಸೂಚಿಸಿದರು.</p>.<p>ಗ್ರಾಮ ಪಂಚಾಯಿತಿ ಚುನಾವಣಾ ಸಂಬಂಧ ಶುಕ್ರವಾರ ತಹಶೀಲ್ದಾರ್ಗಳೊಂದಿಗೆ ವಿಡಿಯೋ ಸಂವಾದ ನಡೆಸಿದರು.</p>.<p>ಸೂಕ್ಷ್ಮ ಮತ್ತು ಅತಿಸೂಕ್ಷ್ಮ ಮತಗಟ್ಟೆಗಳ ಬಗ್ಗೆ ನಿಯಮಾನುಸಾರ ಪರಿಶೀಲಿಸಬೇಕು. ಚುನಾವಣಾ ನೀತಿ ಸಂಹಿತೆ ಅನುಷ್ಠಾನದ ಬಗ್ಗೆತಹಶೀಲ್ದಾರ್, ಇನ್ಸ್ಪೆಕ್ಟರ್, ತಾಲ್ಲೂಕು ಪಂಚಾ<br />ಯಿತಿ ಕಾರ್ಯನಿರ್ವಾಹಣಾಧಿಕಾರಿ ತಂಡ ವ್ಯಾಪಕ ಬಿಗಿ ಕ್ರಮಗಳನ್ನು ಕೈಗೊಳ್ಳಬೇಕು. ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ದೂರುಗಳಿಗಾಗಿ ದೂರು ಕೋಶ ಹಾಗೂ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಬೇಕು ಎಂದು ಸೂಚಿಸಿದರು.</p>.<p>ಮತಗಟ್ಟೆಗಳಿಗೆ ತಹಶೀಲ್ದಾರ್ಗಳು ಖುದ್ದು ಭೇಟಿ ನೀಡಬೇಕು. ಸೌಲಭ್ಯಗಳ ಬಗ್ಗೆ ಪರಿಶೀಲಿಸಬೇಕು. ನ್ಯೂನತೆಗಳಿದ್ದರೆ ಸರಿಪಡಿಸಿ ಮತಗಟ್ಟೆಗಳು ಸಮರ್ಪಕವಾಗಿರುವುದನ್ನು ಖಾತರಿಪಡಿಸಿಕೊಳ್ಳಬೇಕು. ಮುಕ್ತ ಮತ್ತು ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಸಿದ್ಧತೆಗಳನ್ನು ಮಾಡಿಕೊಳ್ಳಿ ಎಂದರು.</p>.<p>ಜಿ.ಪಂ ಸಿಇಒ ಶುಭಾ ಕಲ್ಯಾಣ್, ತಹಶೀಲ್ದಾರ್ ಮೋಹನ್ಕುಮಾರ್, ಚುನಾವಣಾ ಶಾಖೆಯ ನಾಗಭೂಷಣ್, ಎನ್ಐಸಿ ಅಧಿಕಾರಿ ಅಜಯ್, ಜಿಲ್ಲಾ ಅಂಗವಿಕಲರ ಹಾಗೂ ಹಿರಿಯ ನಾಗರಿಕರ ಕಲ್ಯಾಣಾಧಿಕಾರಿ ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>