<p><strong>ಕುಣಿಗಲ್:</strong> ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಗುರುವಾರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬಿಫಾರಂಗೆ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.</p>.<p>17ನೇ ವಾರ್ಡ್ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಈ ವಾರ್ಡ್ಗೆ ಕಾಂಗ್ರೆಸ್ ಪಕ್ಷದ ಟಿಕೆಟ್ಗೆ ಆ ಪಕ್ಷದ ಮುಖಂಡರಾದ ರೆಹಮಾನ್ ಪಾಷ, ಅಬ್ದುಲ್ ಹಮೀದ್ ಮತ್ತು ಜಬೀ ಎಂಬುವರು ತಮ್ಮ ಕುಟುಂಬದವರನ್ನು ಕಣಕ್ಕಿಳಿಸಲು ಮುಂದಾಗಿದ್ದರು.</p>.<p>ಇದರಲ್ಲಿ ಹಮೀದ್ ಗುಂಪಿನ ಆಸ್ಮಾ ಅವರಿಗೆ ಬಿಫಾರಂನ್ನು ಶಾಸಕರು ನೀಡಿದ್ದರು. ನಾಮಪತ್ರ ಸಲ್ಲಿಸಲು ಬಂದಾಗ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದ ಜಬೀ ಮತ್ತು ಅವರ ಬೆಂಬಲಿಗರು ಅಡ್ಡಗಟ್ಟಿ ಹಲ್ಲೆ ನಡೆಸಿ ದಾಖಲೆಗಳನ್ನು ಕಿತ್ತುಕೊಂಡು ಪರಾರಿಯಾದರು.</p>.<p>ಬಳಿಕ ಜಬೀ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲು ಬಂದಾಗ ಜಬೀ ಮತ್ತು ಹಮೀದ್ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಬಡಿದಾಡಿಕೊಂಡರು.</p>.<p>ಜಬೀ ಮತ್ತು ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು. ಈ ಮೊದಲು ಕಿತ್ತುಕೊಂಡು ಹೋಗಿದ್ದ ದಾಖಲೆಗಳನ್ನು ವಶಕ್ಕೆ ಪಡೆದು ಹಮೀದ್ ಅವರಿಗೆ ನೀಡಿ ನಾಮಪತ್ರ ಸಲ್ಲಿಕೆಗೆ ಅನುವು ಮಾಡಿಕೊಟ್ಟರು.</p>.<p>ಕಣ್ಣೀರಿಟ್ಟ ಮುಖಂಡ: ಮತ್ತೊಂದೆಡೆ ತಮ್ಮ ಗುಂಪಿನವರಿಗೆ ಕಾಂಗ್ರೆಸ್ ಟಿಕೆಟ್ ಸಿಗದೇ ಇದ್ದುದಕ್ಕೆ ರೆಹಮಾನ್ ಷರೀಫ್ ಎಂಬುವರು ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್ ನಿಂದ ಬಂದವರಿಗೆ ಶಾಸಕ ಡಾ.ರಂಗನಾಥ್ ನೀಡಿದ್ದಾರೆ ಎಂದು ದೂರಿ ಕಣ್ಣೀರಿಟ್ಟರು. ಇವರ ಬೆಂಬಲಿಗರು ಪ್ರತಿಭಟಿಸಿದರು. ಬಳಿಕ ಷರೀಫ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಣಿಗಲ್:</strong> ಪುರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾದ ಗುರುವಾರ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು ಬಿಫಾರಂಗೆ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ ಚದುರಿಸಿದ್ದಾರೆ.</p>.<p>17ನೇ ವಾರ್ಡ್ ಸಾಮಾನ್ಯ ಮಹಿಳೆಗೆ ಮೀಸಲಾಗಿದ್ದು, ಈ ವಾರ್ಡ್ಗೆ ಕಾಂಗ್ರೆಸ್ ಪಕ್ಷದ ಟಿಕೆಟ್ಗೆ ಆ ಪಕ್ಷದ ಮುಖಂಡರಾದ ರೆಹಮಾನ್ ಪಾಷ, ಅಬ್ದುಲ್ ಹಮೀದ್ ಮತ್ತು ಜಬೀ ಎಂಬುವರು ತಮ್ಮ ಕುಟುಂಬದವರನ್ನು ಕಣಕ್ಕಿಳಿಸಲು ಮುಂದಾಗಿದ್ದರು.</p>.<p>ಇದರಲ್ಲಿ ಹಮೀದ್ ಗುಂಪಿನ ಆಸ್ಮಾ ಅವರಿಗೆ ಬಿಫಾರಂನ್ನು ಶಾಸಕರು ನೀಡಿದ್ದರು. ನಾಮಪತ್ರ ಸಲ್ಲಿಸಲು ಬಂದಾಗ ಟಿಕೆಟ್ ಸಿಗದೇ ಅಸಮಾಧಾನಗೊಂಡಿದ್ದ ಜಬೀ ಮತ್ತು ಅವರ ಬೆಂಬಲಿಗರು ಅಡ್ಡಗಟ್ಟಿ ಹಲ್ಲೆ ನಡೆಸಿ ದಾಖಲೆಗಳನ್ನು ಕಿತ್ತುಕೊಂಡು ಪರಾರಿಯಾದರು.</p>.<p>ಬಳಿಕ ಜಬೀ ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಲು ಬಂದಾಗ ಜಬೀ ಮತ್ತು ಹಮೀದ್ ಗುಂಪಿನ ನಡುವೆ ಮಾತಿನ ಚಕಮಕಿ ನಡೆದು ಬಡಿದಾಡಿಕೊಂಡರು.</p>.<p>ಜಬೀ ಮತ್ತು ಆತನ ಬೆಂಬಲಿಗರನ್ನು ಪೊಲೀಸರು ವಶಕ್ಕೆ ಪಡೆದರು. ಈ ಮೊದಲು ಕಿತ್ತುಕೊಂಡು ಹೋಗಿದ್ದ ದಾಖಲೆಗಳನ್ನು ವಶಕ್ಕೆ ಪಡೆದು ಹಮೀದ್ ಅವರಿಗೆ ನೀಡಿ ನಾಮಪತ್ರ ಸಲ್ಲಿಕೆಗೆ ಅನುವು ಮಾಡಿಕೊಟ್ಟರು.</p>.<p>ಕಣ್ಣೀರಿಟ್ಟ ಮುಖಂಡ: ಮತ್ತೊಂದೆಡೆ ತಮ್ಮ ಗುಂಪಿನವರಿಗೆ ಕಾಂಗ್ರೆಸ್ ಟಿಕೆಟ್ ಸಿಗದೇ ಇದ್ದುದಕ್ಕೆ ರೆಹಮಾನ್ ಷರೀಫ್ ಎಂಬುವರು ಅಸಮಾಧಾನ ವ್ಯಕ್ತಪಡಿಸಿದರು. ಜೆಡಿಎಸ್ ನಿಂದ ಬಂದವರಿಗೆ ಶಾಸಕ ಡಾ.ರಂಗನಾಥ್ ನೀಡಿದ್ದಾರೆ ಎಂದು ದೂರಿ ಕಣ್ಣೀರಿಟ್ಟರು. ಇವರ ಬೆಂಬಲಿಗರು ಪ್ರತಿಭಟಿಸಿದರು. ಬಳಿಕ ಷರೀಫ್ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>