<p><strong>ತುಮಕೂರು:</strong> ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ನವರು 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆಯೇ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p><p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳುತ್ತಿರುವವರು ಮೊದಲು ಸಾಕ್ಷಿ ಕೊಡಲಿ. ಆ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ’ ಎಂದರು.</p><p>ಈ ಬಗ್ಗೆ ಹಲವು ವರ್ಷಗಳಿಂದ ಆರೋಪ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಯಾರೂ ಖಚಿತಪಡಿಸಲು ಸಾಧ್ಯವಾಗಿಲ್ಲ. ಇದೆಲ್ಲ ಊಹಾಪೋಹವೆಂದು ಚುನಾವಣಾ ಆಯೋಗವೂ ಹೇಳಿದೆ. ಸುಪ್ರೀಂ ಕೋರ್ಟ್ನಲ್ಲೂ ಚರ್ಚೆಗಳು ನಡೆದಿವೆ ಎಂದು ಹೇಳಿದರು.</p><p>ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಕೂಗು ಇದೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ಮೂಡಿಸಿ ಸ್ಥಳೀಯರಿಗೆ ಉದ್ಯೋಗ ಕೊಡಿಸಲು ಪ್ರಯತ್ನಿಸಲಾಗುವುದು. ರಾಜ್ಯಕ್ಕೆ ಯಾವೆಲ್ಲ ಕೈಗಾರಿಕೆ ತರಬಹುದು ಎಂಬ ಬಗ್ಗೆ ಗಮನ ಹರಿಸಲಾಗಿದೆ ಎಂದರು.</p><p><strong>ವಿದ್ಯುತ್ ದರ ಏರಿಸಿಲ್ಲ</strong>: ಜೆಡಿಎಸ್ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ನಾನು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಹಾಗಿದ್ದರೆ ದಾಖಲೆ ಕೊಡಲಿ. ಸುಳ್ಳು ಹೇಳಲು ಒಂದು ಮಿತಿ ಇರಬೇಕು’ ಎಂದು ಕಿಡಿಕಾರಿದರು.</p><p>‘ರೈತರ ಸಾಲ ಮನ್ನಾ ಮಾಡಿದ ಸಮಯದಲ್ಲಿ ₹25 ಸಾವಿರ ಕೋಟಿ ಹೊಂದಿಸಲು ತೈಲ ದರ ಹೆಚ್ಚಿಸಲು ಪ್ರಯತ್ನಿಸಿದ್ದೆ. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ. ಈಗ ನೋಡಿದರೆ ಬೆಲೆ ಹೆಚ್ಚು ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ’ ಎಂದರು.</p><h2><strong>ಗೊಲ್ಲ, ಕುಂಚಿಟಿಗರಿಗೆ ಮೀಸಲು: ಭರವಸೆ</strong></h2><p>ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿಗೆ ಸೇರಿಸುವಂತೆ ಸಾಕಷ್ಟು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಮೀಸಲಾತಿ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.</p><p>ಜೆಡಿಎಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕುಂಚಿಟಿಗ ಒಕ್ಕಲಿಗರು ಕೇಂದ್ರದ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಸಾಕಷ್ಟು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟು ಮೀಸಲಾತಿ ಕಲ್ಪಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ವಿದ್ಯುನ್ಮಾನ ಮತಯಂತ್ರ (ಇವಿಎಂ) ಹ್ಯಾಕ್ಮಾಡಿ ರಾಜ್ಯದಲ್ಲಿ ಕಾಂಗ್ರೆಸ್ನವರು 136 ವಿಧಾನಸಭಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದಾರೆಯೇ ಎಂದು ಕೇಂದ್ರ ಉಕ್ಕು ಹಾಗೂ ಬೃಹತ್ ಕೈಗಾರಿಕೆ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದರು.</p><p>ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಇವಿಎಂ ಹ್ಯಾಕ್ ಮಾಡಬಹುದು ಎಂದು ಹೇಳುತ್ತಿರುವವರು ಮೊದಲು ಸಾಕ್ಷಿ ಕೊಡಲಿ. ಆ ನಂತರ ಸತ್ಯ ಏನೆಂಬುದು ಗೊತ್ತಾಗಲಿದೆ’ ಎಂದರು.</p><p>ಈ ಬಗ್ಗೆ ಹಲವು ವರ್ಷಗಳಿಂದ ಆರೋಪ ಮಾಡಿಕೊಂಡು ಬರಲಾಗುತ್ತಿದೆ. ಆದರೆ ಯಾರೂ ಖಚಿತಪಡಿಸಲು ಸಾಧ್ಯವಾಗಿಲ್ಲ. ಇದೆಲ್ಲ ಊಹಾಪೋಹವೆಂದು ಚುನಾವಣಾ ಆಯೋಗವೂ ಹೇಳಿದೆ. ಸುಪ್ರೀಂ ಕೋರ್ಟ್ನಲ್ಲೂ ಚರ್ಚೆಗಳು ನಡೆದಿವೆ ಎಂದು ಹೇಳಿದರು.</p><p>ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ಸಿಗುತ್ತಿಲ್ಲ ಎಂಬ ಕೂಗು ಇದೆ. ಉದ್ಯಮಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ತಿಳಿವಳಿಕೆ ಮೂಡಿಸಿ ಸ್ಥಳೀಯರಿಗೆ ಉದ್ಯೋಗ ಕೊಡಿಸಲು ಪ್ರಯತ್ನಿಸಲಾಗುವುದು. ರಾಜ್ಯಕ್ಕೆ ಯಾವೆಲ್ಲ ಕೈಗಾರಿಕೆ ತರಬಹುದು ಎಂಬ ಬಗ್ಗೆ ಗಮನ ಹರಿಸಲಾಗಿದೆ ಎಂದರು.</p><p><strong>ವಿದ್ಯುತ್ ದರ ಏರಿಸಿಲ್ಲ</strong>: ಜೆಡಿಎಸ್ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ನಾನು ಮುಖ್ಯಮಂತ್ರಿ ಆಗಿದ್ದ ಸಮಯದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಹಾಗಿದ್ದರೆ ದಾಖಲೆ ಕೊಡಲಿ. ಸುಳ್ಳು ಹೇಳಲು ಒಂದು ಮಿತಿ ಇರಬೇಕು’ ಎಂದು ಕಿಡಿಕಾರಿದರು.</p><p>‘ರೈತರ ಸಾಲ ಮನ್ನಾ ಮಾಡಿದ ಸಮಯದಲ್ಲಿ ₹25 ಸಾವಿರ ಕೋಟಿ ಹೊಂದಿಸಲು ತೈಲ ದರ ಹೆಚ್ಚಿಸಲು ಪ್ರಯತ್ನಿಸಿದ್ದೆ. ಆದರೆ ಅದಕ್ಕೆ ಸಿದ್ದರಾಮಯ್ಯ ಅವರೇ ಅವಕಾಶ ನೀಡಲಿಲ್ಲ. ಈಗ ನೋಡಿದರೆ ಬೆಲೆ ಹೆಚ್ಚು ಮಾಡಿದ್ದೇನೆಂದು ಸುಳ್ಳು ಹೇಳುತ್ತಿದ್ದಾರೆ’ ಎಂದರು.</p><h2><strong>ಗೊಲ್ಲ, ಕುಂಚಿಟಿಗರಿಗೆ ಮೀಸಲು: ಭರವಸೆ</strong></h2><p>ಕಾಡುಗೊಲ್ಲರನ್ನು ಪರಿಶಿಷ್ಟ ಪಂಗಡ (ಎಸ್.ಟಿ) ಮೀಸಲಾತಿಗೆ ಸೇರಿಸುವಂತೆ ಸಾಕಷ್ಟು ವರ್ಷಗಳಿಂದ ಬೇಡಿಕೆ ಸಲ್ಲಿಸಿದ್ದಾರೆ. ಈ ಬಗ್ಗೆ ಕೇಂದ್ರದ ಮೇಲೆ ಒತ್ತಡ ತಂದು ಮೀಸಲಾತಿ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು.</p><p>ಜೆಡಿಎಸ್ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿ, ‘ಕುಂಚಿಟಿಗ ಒಕ್ಕಲಿಗರು ಕೇಂದ್ರದ ಇತರೆ ಹಿಂದುಳಿದ ವರ್ಗಗಳ (ಒಬಿಸಿ) ಮೀಸಲಾತಿ ಪಟ್ಟಿಗೆ ಸೇರಿಸುವಂತೆ ಸಾಕಷ್ಟು ಪ್ರಯತ್ನಿಸಿದ್ದರೂ ಸಾಧ್ಯವಾಗಿಲ್ಲ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವರಿಕೆ ಮಾಡಿಕೊಟ್ಟು ಮೀಸಲಾತಿ ಕಲ್ಪಿಸಲು ಪ್ರಯತ್ನ ನಡೆಸಲಾಗುವುದು ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>