<p><strong>ತಿಪಟೂರು:</strong> ತಾಲ್ಲೂಕಿನ ಜನರಿಗೆ ಅನುಕೂಲವಾಗುವಂತೆ ಎರಡು ಆಮ್ಲಜನಕ ಸಹಿತ ತುರ್ತು ಚಿಕಿತ್ಸಾ ವಾಹನ ಹಾಗೂ ಸೋಂಕಿತರು ಮನೆಗೆ ತೆರಳಲು ಪ್ರತ್ಯೇಕ ವಾಹನಗಳನ್ನು ತಾಲ್ಲೂಕು ಕಾಂಗ್ರೆಸ್ನಿಂದ ಒಟ್ಟು 4 ವಾಹನಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.</p>.<p>ನಗರದ ಬಯಲು ರಂಗ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆಯ ಮುಂಜಾಗ್ರತೆ ಬಗ್ಗೆ ತಿಳಿದಿದ್ದ ಕೇಂದ್ರ ಸರ್ಕಾರ ಸಕಲಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಎಡವಿದೆ. ಒಟ್ಟಿನಲ್ಲಿ ಇಡೀದೇಶದಲ್ಲಿ ಕೊರೊನಾ ಹೊಡೆದೊಡಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ವಿಫಲವಾಗಿದೆ. ವಿರೋಧ ಪಕ್ಷದ ಒತ್ತಾಯಕ್ಕೆ ಮಣಿದು ಕೆಲವು ಸೌಕರ್ಯಗಳನ್ನು ನೀಡಲು ಮುಂದಾಗಿದ್ದಾರೆ ಎಂದರು.</p>.<p>ದೇಶದಲ್ಲಿ ಲಸಿಕೆ ಅಭಾವ ಎದುರಾಗಿದೆ. ಹೊರ ದೇಶಗಳಿಗೆ ಲಸಿಕೆ ಕಳುಹಿಸುವ ಮೊದಲು ಅಗತ್ಯವಿರುವ ಲಸಿಕೆಗಳನ್ನು ದೇಶದ ಜನರಿಗೆ ನೀಡಬೇಕಿತ್ತು ಎಂದರು.</p>.<p>ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಲು ಅನುಮತಿ ಕೋರಿದರೂ ನಿರಾಕರಿಸಿರುವುದು ಬೇಸರದ ಸಂಗತಿ. ಸರ್ಕಾರ ಆರೋಗ್ಯ ವಿಷಯದಲ್ಲಿ ಗೋಪ್ಯತೆಗಳನ್ನು ಬಿಟ್ಟು ಸತ್ಯಾಸತ್ಯತೆಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮೇ 25 ರಂದು ಬೆಳಿಗ್ಗೆ 11 ಗಂಟೆಗೆ ಎರಡು ಆಮ್ಲಜನಕ ಸಹಿತ ತುರ್ತು ಚಿಕಿತ್ಸಾ ವಾಹನಗಳನ್ನು ಸೇವೆಗೆ ನೀಡಲಾಗುವುದು. ನಂತರ ಪೊಲೀಸ್ ಇಲಾಖೆಗೆ, ವೈದ್ಯಕೀಯ ಸಿಬ್ಬಂದಿಗೆ, ಪೌರಕಾರ್ಮಿಕರಿಗೆ ಅಗತ್ಯವಿರುವ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್, ಪಿಪಿಇ ಕಿಟ್ ನೀಡಲಾಗುವುದು ಎಂದರು.</p>.<p>ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಮಡೆನೂರು ಕಾಂತರಾಜು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಟಿ.ಎನ್.ಪ್ರಕಾಶ್, ಕೆಪಿಸಿಸಿ ಸದಸ್ಯ ಯೋಗೇಶ್, ಎನ್.ಎಂ.ಸುರೇಶ್, ಯೋಗಾನಂದ, ಲೋಕನಾಥ್ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿಪಟೂರು:</strong> ತಾಲ್ಲೂಕಿನ ಜನರಿಗೆ ಅನುಕೂಲವಾಗುವಂತೆ ಎರಡು ಆಮ್ಲಜನಕ ಸಹಿತ ತುರ್ತು ಚಿಕಿತ್ಸಾ ವಾಹನ ಹಾಗೂ ಸೋಂಕಿತರು ಮನೆಗೆ ತೆರಳಲು ಪ್ರತ್ಯೇಕ ವಾಹನಗಳನ್ನು ತಾಲ್ಲೂಕು ಕಾಂಗ್ರೆಸ್ನಿಂದ ಒಟ್ಟು 4 ವಾಹನಗಳನ್ನು ಉಚಿತವಾಗಿ ನೀಡಲಾಗುವುದು ಎಂದು ಮಾಜಿ ಶಾಸಕ ಕೆ.ಷಡಕ್ಷರಿ ತಿಳಿಸಿದರು.</p>.<p>ನಗರದ ಬಯಲು ರಂಗ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.</p>.<p>ಕೊರೊನಾ ಎರಡನೇ ಅಲೆಯ ಮುಂಜಾಗ್ರತೆ ಬಗ್ಗೆ ತಿಳಿದಿದ್ದ ಕೇಂದ್ರ ಸರ್ಕಾರ ಸಕಲಸೌಲಭ್ಯಗಳನ್ನು ಜನರಿಗೆ ಒದಗಿಸುವಲ್ಲಿ ಎಡವಿದೆ. ಒಟ್ಟಿನಲ್ಲಿ ಇಡೀದೇಶದಲ್ಲಿ ಕೊರೊನಾ ಹೊಡೆದೊಡಿಸುವಲ್ಲಿ ನರೇಂದ್ರ ಮೋದಿ ಸರ್ಕಾರ ವಿಫಲವಾಗಿದೆ. ವಿರೋಧ ಪಕ್ಷದ ಒತ್ತಾಯಕ್ಕೆ ಮಣಿದು ಕೆಲವು ಸೌಕರ್ಯಗಳನ್ನು ನೀಡಲು ಮುಂದಾಗಿದ್ದಾರೆ ಎಂದರು.</p>.<p>ದೇಶದಲ್ಲಿ ಲಸಿಕೆ ಅಭಾವ ಎದುರಾಗಿದೆ. ಹೊರ ದೇಶಗಳಿಗೆ ಲಸಿಕೆ ಕಳುಹಿಸುವ ಮೊದಲು ಅಗತ್ಯವಿರುವ ಲಸಿಕೆಗಳನ್ನು ದೇಶದ ಜನರಿಗೆ ನೀಡಬೇಕಿತ್ತು ಎಂದರು.</p>.<p>ರಾಜ್ಯದ ಸ್ಥಿತಿಗತಿಗಳ ಬಗ್ಗೆ ಅರಿಯಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳ ಸಭೆ ನಡೆಸಲು ಅನುಮತಿ ಕೋರಿದರೂ ನಿರಾಕರಿಸಿರುವುದು ಬೇಸರದ ಸಂಗತಿ. ಸರ್ಕಾರ ಆರೋಗ್ಯ ವಿಷಯದಲ್ಲಿ ಗೋಪ್ಯತೆಗಳನ್ನು ಬಿಟ್ಟು ಸತ್ಯಾಸತ್ಯತೆಗಳನ್ನು ಜನರಿಗೆ ತಿಳಿಸುವ ಕಾರ್ಯ ಮಾಡಬೇಕು ಎಂದು ಒತ್ತಾಯಿಸಿದರು.</p>.<p>ಮೇ 25 ರಂದು ಬೆಳಿಗ್ಗೆ 11 ಗಂಟೆಗೆ ಎರಡು ಆಮ್ಲಜನಕ ಸಹಿತ ತುರ್ತು ಚಿಕಿತ್ಸಾ ವಾಹನಗಳನ್ನು ಸೇವೆಗೆ ನೀಡಲಾಗುವುದು. ನಂತರ ಪೊಲೀಸ್ ಇಲಾಖೆಗೆ, ವೈದ್ಯಕೀಯ ಸಿಬ್ಬಂದಿಗೆ, ಪೌರಕಾರ್ಮಿಕರಿಗೆ ಅಗತ್ಯವಿರುವ ಮಾಸ್ಕ್, ಸ್ಯಾನಿಟೈಸರ್, ಫೇಸ್ ಶೀಲ್ಡ್, ಪಿಪಿಇ ಕಿಟ್ ನೀಡಲಾಗುವುದು ಎಂದರು.</p>.<p>ತಾಲ್ಲೂಕು ಕಾಂಗ್ರೆಸ್ ಘಟಕದ ಅಧ್ಯಕ್ಷ ಮಡೆನೂರು ಕಾಂತರಾಜು, ನಗರ ಕಾಂಗ್ರೆಸ್ ಘಟಕದ ಅಧ್ಯಕ್ಷ ಟಿ.ಎನ್.ಪ್ರಕಾಶ್, ಕೆಪಿಸಿಸಿ ಸದಸ್ಯ ಯೋಗೇಶ್, ಎನ್.ಎಂ.ಸುರೇಶ್, ಯೋಗಾನಂದ, ಲೋಕನಾಥ್ ಸಿಂಗ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>