ಮಧುಗಿರಿ: ‘ಸಮುದಾಯದ ಆರ್ಥಿಕ ಅಭಿವೃದ್ಧಿಯನ್ನು ಬಲಪಡಿಸಲು ಸಂಘಟನೆಯ ಜೊತೆಗೆ ಎಲ್ಲರೂ ಸಾಮೂಹಿಕ ಸಹಭಾಗಿತ್ವಕ್ಕೆ ಮುಂದಾಗಬೇಕು’ ಎಂದು ಮಾದಿಗ ದಂಡೋರ ರಾಜ್ಯ ಉಪಾಧ್ಯಕ್ಷ ತೊಂಡೋಟಿ ರಾಮಾಂಜಿನಪ್ಪ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಮಾದಿಗ ದಂಡೋರ ಒಳ ಮೀಸಲಾತಿ ಹೋರಾಟ ಸಮಿತಿ ಹಾಗೂ ಜೀವಿಕ ಸಂಘಟನೆಯ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದಸಾಪ ತಾಲ್ಲೂಕು ಅಧ್ಯಕ್ಷ ಡಾ.ಮಹರಾಜು ಮಾತನಾಡಿದರು.
ದಲಿತ ಒಕ್ಕೂಟದ ಅಧ್ಯಕ್ಷ ಜೀವಿಕ ಡಾ.ಸಂಜೀವಮೂರ್ತಿ ಮಾತನಾಡಿದರು. ಮಾದಿಗ ದಂಡೋರ ತಾಲ್ಲೂಕು ಅಧ್ಯಕ್ಷ ತಿಪ್ಪಾಪುರ ಶ್ರೀರಾಮಪ್ಪ, ಜೀವಿಕ ಸಂಘಟನೆಯ ಸಂಚಾಲಕ ಹನುಮಂತರಾಯಪ್ಪ, ಉಪಾಧ್ಯಕ್ಷ ರಮೇಶ್, ಮುಖಂಡರಾದ ಶಿವಣ್ಣ, ಶಿವಕುಮಾರ್ ಇದ್ದರು.