ರಸ್ತೆ ಅಭಿವೃದ್ಧಿ ಕಾಮಗಾರಿಯು ಕಳೆದ ಮೂರು ತಿಂಗಳಿನಿಂದ ನಡೆಯುತ್ತಿದ್ದು, ಸೂಚನಾ ಫಲಕ ಅಳವಡಿಸಿರಲಿಲ್ಲ. ಈಗಾಗಲೇ ಸುಮಾರು ಹದಿನೈದರಿಂದ ಇಪ್ಪತ್ತು ಜನ ಹಳ್ಳಕ್ಕೆ ಬಿದ್ದು, ಗಾಯಗೊಂಡಿದ್ದಾರೆ. ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ವ್ಯಕ್ತಿ ಪ್ರಾಣ ಹೋಗಿದೆ. ಕಾಮಗಾರಿ ಪೂರ್ಣಗೊಳಿಸಿ ಹಳ್ಳ ಮುಚ್ಚದಿರುವುದೇ ಅಪಘಾತಕ್ಕೆ ಕಾರಣವಾಗಿದೆ. ಪಾಲಿಕೆ ಅಧಿಕಾರಿಗಳು ಎಚ್ಚೆತ್ತುಕೊಂಡು ಹಳ್ಳ ಮುಚ್ಚಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದರು.