<p><strong>ತುಮಕೂರು: </strong>ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಇಂಧನ ಉಳಿತಾಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಶುಕ್ರವಾರ ಜಾಥಾ ನಡೆಸಿದರು.</p>.<p>ಎಸ್ಎಸ್ಐಟಿ ಕ್ಯಾಂಪಸ್ನಿಂದ ಟೌನ್ಹಾಲ್ ವರೆಗೆ ಜಾಥಾ ನಡೆಯಿತು. ಜಾಥಾಗೆ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್ ಚಾಲನೆ ನೀಡಿದರು. ಅಮೂಲ್ಯವಾದ ಇಂಧನ ಸಂಪನ್ಮೂಲ ಉಳಿತಾಯ ಮಾಡಬೇಕು. ಮರುಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು.</p>.<p>‘ಸಾಹೆ’ ವಿಶ್ವವಿದ್ಯಾಲಯ ಕುಲಸಚಿವ ಡಾ.ಎಂ.ಝಡ್.ಕುರಿಯನ್, ಅನವಶ್ಯಕವಾಗಿ ವಿದ್ಯುತ್ ವ್ಯರ್ಥಮಾಡುವುದನ್ನು ಸ್ವಪ್ರೇರಣೆಯಿಂದ ತಡೆಗಟ್ಟಬೇಬೇಕು ಎಂದರು.</p>.<p>ವಿದ್ಯಾರ್ಥಿ ಮುಸ್ಕಾನ್, ರೇವತಿ ಮಾತನಾಡಿದರು. ವಿದ್ಯುತ್ ಹಾಗೂ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ.ಎಲ್.ಸಂಜೀವ್ ಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಡಾ.ಕೆ.ವಿ.ಕುಮಾರ್, ಮಾಧ್ಯಮ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಐಟಿಐ ಕಾಲೇಜು ಪ್ರಾಂಶುಪಾಲ ಪ್ರೊ.ಟಿ.ಎಸ್.ಬಸವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು: </strong>ನಗರದ ಸಿದ್ಧಾರ್ಥ ತಾಂತ್ರಿಕ ಮಹಾವಿದ್ಯಾಲಯ, ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಸಹಯೋಗದಲ್ಲಿ ಇಂಧನ ಉಳಿತಾಯ ಸಪ್ತಾಹದ ಅಂಗವಾಗಿ ವಿದ್ಯಾರ್ಥಿಗಳು ಶುಕ್ರವಾರ ಜಾಥಾ ನಡೆಸಿದರು.</p>.<p>ಎಸ್ಎಸ್ಐಟಿ ಕ್ಯಾಂಪಸ್ನಿಂದ ಟೌನ್ಹಾಲ್ ವರೆಗೆ ಜಾಥಾ ನಡೆಯಿತು. ಜಾಥಾಗೆ ಪ್ರಾಂಶುಪಾಲ ಡಾ.ಎಂ.ಎಸ್.ರವಿಪ್ರಕಾಶ್ ಚಾಲನೆ ನೀಡಿದರು. ಅಮೂಲ್ಯವಾದ ಇಂಧನ ಸಂಪನ್ಮೂಲ ಉಳಿತಾಯ ಮಾಡಬೇಕು. ಮರುಬಳಕೆ ಬಗ್ಗೆ ಅರಿವು ಮೂಡಿಸಬೇಕು ಎಂದು ಸಲಹೆ ಮಾಡಿದರು.</p>.<p>‘ಸಾಹೆ’ ವಿಶ್ವವಿದ್ಯಾಲಯ ಕುಲಸಚಿವ ಡಾ.ಎಂ.ಝಡ್.ಕುರಿಯನ್, ಅನವಶ್ಯಕವಾಗಿ ವಿದ್ಯುತ್ ವ್ಯರ್ಥಮಾಡುವುದನ್ನು ಸ್ವಪ್ರೇರಣೆಯಿಂದ ತಡೆಗಟ್ಟಬೇಬೇಕು ಎಂದರು.</p>.<p>ವಿದ್ಯಾರ್ಥಿ ಮುಸ್ಕಾನ್, ರೇವತಿ ಮಾತನಾಡಿದರು. ವಿದ್ಯುತ್ ಹಾಗೂ ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ.ಎಲ್.ಸಂಜೀವ್ ಕುಮಾರ್, ಪದವಿ ಕಾಲೇಜು ಪ್ರಾಂಶುಪಾಲ ಡಾ.ಕೆ.ವಿ.ಕುಮಾರ್, ಮಾಧ್ಯಮ ಕೇಂದ್ರದ ನಿರ್ದೇಶಕ ಡಾ.ಬಿ.ಟಿ.ಮುದ್ದೇಶ್, ಐಟಿಐ ಕಾಲೇಜು ಪ್ರಾಂಶುಪಾಲ ಪ್ರೊ.ಟಿ.ಎಸ್.ಬಸವರಾಜು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>