ನಗರದ ಸಂಚಾರ ಠಾಣೆಯ ಹೆಡ್ ಕಾನ್ಸ್ಟೆಬಲ್ ರಾಮಕೃಷ್ಣ, ಊರ್ಡಿಗೆರೆ ಉಪಠಾಣೆ ಹೆಡ್ ಕಾನ್ಸ್ಟೆಬಲ್ ಅಹೋಬಲಯ್ಯ, ಜಯನಗರ ಠಾಣೆಯ ಕಾನ್ಸ್ಟೆಬಲ್ಲ್ ಮನು, ಕ್ಯಾತ್ಸಂದ್ರ ಠಾಣೆ ಕಾನ್ಸ್ಟೆಬಲ್ ಮಂಜುನಾಥ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಯ ಸಿಬ್ಬಂದಿ ಸುರೇಶ್ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ಆದೇಶಿಸಿದ್ದಾರೆ.