<p><strong>ತುರುವೇಕೆರೆ:</strong> ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತರಾಗದೆ ಕ್ರೀಡೆ, ಸಂಗೀತ, ಸಾಹಿತ್ಯದಂತಹ ಹಲವು ಸೃಜನಶೀಲ ಕಲೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ನೊಣವಿನಕರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಪಟ್ಟಣದ ಹೊರಪೇಟೆ ಶಿವಯೋಗಿಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ಗುರುವಾರ ಇಂಡಿಯನ್ ಪಬ್ಲಿಕ್ ಶಾಲೆಯಿಂದ ಆಯೋಜಿಸದ್ದ ಐಪಿಎಸ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಿಕ್ಷಣದಲ್ಲಿ ಅಪೂರ್ವ ಸಾಧನೆಗೈದ ವಿದ್ಯಾರ್ಥಿಗಳನ್ನು ಮಾದರಿಯಾಗಿಟ್ಟು ವಿದ್ಯಾರ್ಥಿಗಳು ಓದು, ಅಧ್ಯಯನ ಮಾಡಿ ಶಾಲೆ, ಶಿಕ್ಷಕರು ಮತ್ತು ಹುಟ್ಟೂರು ಮೆಚ್ಚುವಂತಹ ಮಕ್ಕಳಾಗಿ ಬೆಳೆಯಬೇಕು ಎಂದರು.</p>.<p>ಹಾಲಪ್ಪ ಪ್ರತಿಷ್ಠಾನದ ಸಂಸ್ಥಾಪಕ ಮುರಳೀದರ ಹಾಲಪ್ಪ ಮಾತನಾಡಿ, ಈ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮುತ್ತಿದ್ದಾರೆ. ಈಗಾಗಲೇ ಕಬ್ಬಡಿ, ಕ್ರಿಕ್ರೆಟ್ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.</p>.<p>ಇಂಡಿಯನ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ರುದ್ರಯ್ಯ ಹಿರೇಮಠ ಮಾತನಾಡಿದರು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗಮೇಶ ಮೇಟಿ, ಇಂಡಿಯನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಪುಷ್ಪ ಎಸ್.ಪಾಟೀಲ, ಮುಖ್ಯ ಶಿಕ್ಷಕರಾದ ಶಶಿಕಲ ಹಿರೇಮಠ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುರುವೇಕೆರೆ:</strong> ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತರಾಗದೆ ಕ್ರೀಡೆ, ಸಂಗೀತ, ಸಾಹಿತ್ಯದಂತಹ ಹಲವು ಸೃಜನಶೀಲ ಕಲೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ನೊಣವಿನಕರೆ ಕಾಡಸಿದ್ದೇಶ್ವರ ಮಠದ ಕರಿವೃಷಭ ದೇಶಿಕೇಂದ್ರ ಶಿವಯೋಗಿಶ್ವರ ಸ್ವಾಮೀಜಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.</p>.<p>ಪಟ್ಟಣದ ಹೊರಪೇಟೆ ಶಿವಯೋಗಿಶ್ವರ ಕಲ್ಯಾಣ ಮಂಟಪದ ಆವರಣದಲ್ಲಿ ಗುರುವಾರ ಇಂಡಿಯನ್ ಪಬ್ಲಿಕ್ ಶಾಲೆಯಿಂದ ಆಯೋಜಿಸದ್ದ ಐಪಿಎಸ್ ಸಂಭ್ರಮ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಶಿಕ್ಷಣದಲ್ಲಿ ಅಪೂರ್ವ ಸಾಧನೆಗೈದ ವಿದ್ಯಾರ್ಥಿಗಳನ್ನು ಮಾದರಿಯಾಗಿಟ್ಟು ವಿದ್ಯಾರ್ಥಿಗಳು ಓದು, ಅಧ್ಯಯನ ಮಾಡಿ ಶಾಲೆ, ಶಿಕ್ಷಕರು ಮತ್ತು ಹುಟ್ಟೂರು ಮೆಚ್ಚುವಂತಹ ಮಕ್ಕಳಾಗಿ ಬೆಳೆಯಬೇಕು ಎಂದರು.</p>.<p>ಹಾಲಪ್ಪ ಪ್ರತಿಷ್ಠಾನದ ಸಂಸ್ಥಾಪಕ ಮುರಳೀದರ ಹಾಲಪ್ಪ ಮಾತನಾಡಿ, ಈ ಶಾಲೆಯ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಉತ್ತಮ ಸಾಧಕರಾಗಿ ಹೊರಹೊಮ್ಮುತ್ತಿದ್ದಾರೆ. ಈಗಾಗಲೇ ಕಬ್ಬಡಿ, ಕ್ರಿಕ್ರೆಟ್ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ ಎಂದರು.</p>.<p>ಇಂಡಿಯನ್ ಪಬ್ಲಿಕ್ ಶಾಲೆ ಕಾರ್ಯದರ್ಶಿ ರುದ್ರಯ್ಯ ಹಿರೇಮಠ ಮಾತನಾಡಿದರು.</p>.<p>ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಕಾರ್ಯಕ್ರಮದಲ್ಲಿ ಪಿಎಸ್ಐ ಸಂಗಮೇಶ ಮೇಟಿ, ಇಂಡಿಯನ್ ಪಬ್ಲಿಕ್ ಶಾಲೆಯ ಪ್ರಾಂಶುಪಾಲೆ ಪುಷ್ಪ ಎಸ್.ಪಾಟೀಲ, ಮುಖ್ಯ ಶಿಕ್ಷಕರಾದ ಶಶಿಕಲ ಹಿರೇಮಠ, ಶಿಕ್ಷಕರು, ಪೋಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>