<p><strong>ಪಾವಗಡ:</strong> ಜಾಗತಿಕ ತಾಪಮಾನ ಸಮಸ್ಯೆಗೆ ಪರಿಸರ ಸಂರಕ್ಷಣೆಯೊಂದೇ ಪರಿಹಾರ ಎಂದು ನ್ಯಾಯಾದೀಶ ವಿ.ಮಾದೇಶ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿಸಿಲಿನ ತಾಪ ಹೆಚ್ಚಿರುವಾಗ ಜನತೆ ನೆರಳಿಗಾಗಿ ಮರವನ್ನು ಹುಡುಕಾಡುವುದು ಸಾಮಾನ್ಯ. ಆದರೆ ಸಸಿಗಳನ್ನು ನೆಟ್ಟು ಪೋಷಿಸಿದಲ್ಲಿ ಮಾತ್ರ ಮರದ ನೆರಳು ಪಡೆಯಬಹುದು ಎಂಬ ತಿಳುವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಸಾಧ್ಯವಾದಷ್ಟು ಮರ ಗಿಡಗಳಲ್ಲಿ ಬೆಳೆಸಬೇಕು ಎಂದು ತಿಳಿಸಿದರು.</p>.<p>ವಲಯ ಅರಣ್ಯ ಅಧಿಕಾರಿ ರಾಕೇಶ್, ಇಂದು ಸಾಂಕೇತಿಕವಾಗಿ ಪರಿಸರ ದಿನ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿ ಮಳೆಯ ಅಭಾವವಿದ್ದು, ಮಳೆ ಬಂದಾಗ ಸಸಿಗಳನ್ನು ನೆಡಲು ಹಲವು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.</p>.<p>ವಕೀಲ ಸಂಘದ ಅಧ್ಯಕ್ಷ ಶೇಷಾನಂದನ್, ಮನುಷ್ಯನ ಉಳಿವಿಗೆ ಅಗತ್ಯವಿರುವ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಹೊಣೆ ಎಂದರು.</p>.<p>ನ್ಯಾಯಾಲಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<p>ನ್ಯಾಯಾಧೀಶರಾದ ಬಿ. ಪ್ರಿಯಾಂಕಾ, ಸಿ. ಮುನಿರತ್ನಮ್ಮ, ವಕೀಲ ಸಣ್ಣೀರಪ್ಪ, ವಕೀಲ ಸಂಘದ ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಉಪ ವಲಯ ಅರಣ್ಯಾಧಿಕಾರಿ ಬಸವರಾಜು, ಜಯಲಕ್ಷ್ಮಿ, ಕೇಶವ್, ಸಾಮಾಜಿಕ ಅರಣ್ಯ ಅಧಿಕಾರಿ ರಾಜಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾವಗಡ:</strong> ಜಾಗತಿಕ ತಾಪಮಾನ ಸಮಸ್ಯೆಗೆ ಪರಿಸರ ಸಂರಕ್ಷಣೆಯೊಂದೇ ಪರಿಹಾರ ಎಂದು ನ್ಯಾಯಾದೀಶ ವಿ.ಮಾದೇಶ ತಿಳಿಸಿದರು.</p>.<p>ಪಟ್ಟಣದ ನ್ಯಾಯಾಲಯ ಆವರಣದಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಅರಣ್ಯ ಇಲಾಖೆ ಗುರುವಾರ ಹಮ್ಮಿಕೊಂಡಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಬಿಸಿಲಿನ ತಾಪ ಹೆಚ್ಚಿರುವಾಗ ಜನತೆ ನೆರಳಿಗಾಗಿ ಮರವನ್ನು ಹುಡುಕಾಡುವುದು ಸಾಮಾನ್ಯ. ಆದರೆ ಸಸಿಗಳನ್ನು ನೆಟ್ಟು ಪೋಷಿಸಿದಲ್ಲಿ ಮಾತ್ರ ಮರದ ನೆರಳು ಪಡೆಯಬಹುದು ಎಂಬ ತಿಳುವಳಿಕೆ ಪ್ರತಿಯೊಬ್ಬರಲ್ಲೂ ಇರಬೇಕು. ಪ್ರತಿಯೊಬ್ಬರೂ ತಮ್ಮ ಸುತ್ತಲಿನ ಪರಿಸರದಲ್ಲಿ ಸಾಧ್ಯವಾದಷ್ಟು ಮರ ಗಿಡಗಳಲ್ಲಿ ಬೆಳೆಸಬೇಕು ಎಂದು ತಿಳಿಸಿದರು.</p>.<p>ವಲಯ ಅರಣ್ಯ ಅಧಿಕಾರಿ ರಾಕೇಶ್, ಇಂದು ಸಾಂಕೇತಿಕವಾಗಿ ಪರಿಸರ ದಿನ ಆಚರಣೆ ಮಾಡಲಾಗುತ್ತಿದೆ. ತಾಲ್ಲೂಕಿನಲ್ಲಿ ಮಳೆಯ ಅಭಾವವಿದ್ದು, ಮಳೆ ಬಂದಾಗ ಸಸಿಗಳನ್ನು ನೆಡಲು ಹಲವು ಕಾರ್ಯಕ್ರಮ ರೂಪಿಸಲಾಗಿದೆ ಎಂದರು.</p>.<p>ವಕೀಲ ಸಂಘದ ಅಧ್ಯಕ್ಷ ಶೇಷಾನಂದನ್, ಮನುಷ್ಯನ ಉಳಿವಿಗೆ ಅಗತ್ಯವಿರುವ ಪರಿಸರವನ್ನು ಸಂರಕ್ಷಿಸುವುದು ಎಲ್ಲರ ಹೊಣೆ ಎಂದರು.</p>.<p>ನ್ಯಾಯಾಲಯ ಆವರಣದಲ್ಲಿ ಸಸಿಗಳನ್ನು ನೆಡಲಾಯಿತು.</p>.<p>ನ್ಯಾಯಾಧೀಶರಾದ ಬಿ. ಪ್ರಿಯಾಂಕಾ, ಸಿ. ಮುನಿರತ್ನಮ್ಮ, ವಕೀಲ ಸಣ್ಣೀರಪ್ಪ, ವಕೀಲ ಸಂಘದ ಕಾರ್ಯದರ್ಶಿ ಪ್ರಭಾಕರ್ ರೆಡ್ಡಿ, ಉಪ ವಲಯ ಅರಣ್ಯಾಧಿಕಾರಿ ಬಸವರಾಜು, ಜಯಲಕ್ಷ್ಮಿ, ಕೇಶವ್, ಸಾಮಾಜಿಕ ಅರಣ್ಯ ಅಧಿಕಾರಿ ರಾಜಶೇಖರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>