<p><strong>ತುಮಕೂರು</strong>: ವೀರಶೈವ ಲಿಂಗಾಯತ ಸಮುದಾಯದಷ್ಟೇ ಒಕ್ಕಲಿಗರ ಸಮುದಾಯ ಸಹ ರಾಜ್ಯದಲ್ಲಿ ಪ್ರಮುಖವಾಗಿದೆ. ಈ ಸಮುದಾಯದಲ್ಲೂ ಬಡವರು ಇದ್ದಾರೆ. ಆದ್ದರಿಂದ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿ ನಿಗಮಗಳ ಮೂಲಕ ಬಡವರ ಅಭಿವೃದ್ಧಿಗೆ ಮುಂದಾಗಬೇಕು ಎಂದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಲಾಗಿದೆ. ಆದರೆ ಅದಕ್ಕೆ ಹಣ ಮೀಸಲಿಟ್ಟಿಲ್ಲ. ಅಧ್ಯಕ್ಷರನ್ನು ನೇಮಿಸಿಲ್ಲ. ಈಗ ತಿಗಳ ಸಮುದಾಯ ಮತ್ತು ಬಲಿಜ ಸಮುದಾಯ ಅಭಿವೃದ್ಧಿ ನಿಯಮಕ್ಕೆ ಆಗ್ರಹಿಸುತ್ತಿವೆ ಎಂದರು.</p>.<p>ಶಿರಾ ಉಪಚುನಾವಣೆಗಾಗಿ ಮದಲೂರು ಕೆರೆಗೆ ಮುಖ್ಯಮಂತ್ರಿ ನೀರು ಹರಿಸಿದ್ದಾರೆ. ಜಿಲ್ಲೆಯ ಬೇರೆ ತಾಲ್ಲೂಕುಗಳು ಸಹ ಬರದಿಂದ ನಲುಗಿವೆ. ಅಲ್ಲಿಗೂ ನೀರು ಹರಿಸಬೇಕು ಎಂದು ಹೇಳಿದರು.</p>.<p>ಜೆಡಿಎಸ್ ತುಮಕೂರು ಜಿಲ್ಲೆಯಲ್ಲಿ ಸದೃಢವಾಗಿದೆ. ಆದರೆ ಸಂಪನ್ಮೂಲದ ಕೊರತೆಯಿಂದ ಚುನಾವಣೆಗಳಲ್ಲಿ ಸೋಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು</strong>: ವೀರಶೈವ ಲಿಂಗಾಯತ ಸಮುದಾಯದಷ್ಟೇ ಒಕ್ಕಲಿಗರ ಸಮುದಾಯ ಸಹ ರಾಜ್ಯದಲ್ಲಿ ಪ್ರಮುಖವಾಗಿದೆ. ಈ ಸಮುದಾಯದಲ್ಲೂ ಬಡವರು ಇದ್ದಾರೆ. ಆದ್ದರಿಂದ ಒಕ್ಕಲಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ತುಮಕೂರು ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಶಾಸಕ ಡಿ.ಸಿ.ಗೌರಿಶಂಕರ್ ತಿಳಿಸಿದರು.</p>.<p>ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರ ಅಭಿವೃದ್ಧಿ ನಿಗಮಗಳ ಮೂಲಕ ಬಡವರ ಅಭಿವೃದ್ಧಿಗೆ ಮುಂದಾಗಬೇಕು ಎಂದರು.</p>.<p>ಕಾಡುಗೊಲ್ಲರ ಅಭಿವೃದ್ಧಿ ನಿಗಮ ರಚಿಸಲಾಗಿದೆ. ಆದರೆ ಅದಕ್ಕೆ ಹಣ ಮೀಸಲಿಟ್ಟಿಲ್ಲ. ಅಧ್ಯಕ್ಷರನ್ನು ನೇಮಿಸಿಲ್ಲ. ಈಗ ತಿಗಳ ಸಮುದಾಯ ಮತ್ತು ಬಲಿಜ ಸಮುದಾಯ ಅಭಿವೃದ್ಧಿ ನಿಯಮಕ್ಕೆ ಆಗ್ರಹಿಸುತ್ತಿವೆ ಎಂದರು.</p>.<p>ಶಿರಾ ಉಪಚುನಾವಣೆಗಾಗಿ ಮದಲೂರು ಕೆರೆಗೆ ಮುಖ್ಯಮಂತ್ರಿ ನೀರು ಹರಿಸಿದ್ದಾರೆ. ಜಿಲ್ಲೆಯ ಬೇರೆ ತಾಲ್ಲೂಕುಗಳು ಸಹ ಬರದಿಂದ ನಲುಗಿವೆ. ಅಲ್ಲಿಗೂ ನೀರು ಹರಿಸಬೇಕು ಎಂದು ಹೇಳಿದರು.</p>.<p>ಜೆಡಿಎಸ್ ತುಮಕೂರು ಜಿಲ್ಲೆಯಲ್ಲಿ ಸದೃಢವಾಗಿದೆ. ಆದರೆ ಸಂಪನ್ಮೂಲದ ಕೊರತೆಯಿಂದ ಚುನಾವಣೆಗಳಲ್ಲಿ ಸೋಲಾಗುತ್ತಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>